<p><strong>ಬೆಂಗಳೂರು:</strong> ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸ್ವಾಮಿ ಪಾಳ್ಯದ ಕಾರ್ಪೊರೇಟರ್ ನೇತ್ರಾವತಿ ಅವರ ಪತಿ ಕೃಷ್ಣೇಗೌಡ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಬುಧವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿತು.</p>.<p>ರಾಮಸ್ವಾಮಿ ಪಾಳ್ಯ ಬಿಬಿಎಂಪಿಯ 62ನೇ ವಾರ್ಡ್ ಆಗಿದ್ದು ಶಿವಾಜಿನಗರ ವಿಧಾನಸಭೆ ವ್ಯಾಪ್ತಿಗೆ ಸೇರಿದೆ. ಐಎಂಎ ಆರೋಪಿಗಳ ಜೊತೆ ರಾಮಸ್ವಾಮಿ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೃಷ್ಣೇಗೌಡರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<p>ಗುರುವಾರ ರೋಷನ್ ಬೇಗ್ ವಿಚಾರಣೆ: ಈ ಮಧ್ಯೆ, ಗುರುವಾರ ಬೆಳಿಗ್ಗೆ ವಿಚಾರಣೆಗಾಗಿ ಎಸ್ಐಟಿ ಮುಂದೆ ಶಿವಾಜಿ ನಗರದ ಶಾಸಕ ರೋಷನ್ ಬೇಗ್ ಹಾಜರಾಗಲಿದ್ದಾರೆ.</p>.<p>ವಿಚಾರಣೆಗೆ ಹಾಜರಾಗಲು ತಮಗೆ ಸ್ವಲ್ಪ ಕಾಲಾವಕಾಶ ನೀಡುವಂತೆ ಎಸ್ಐಟಿ ಮುಖ್ಯಸ್ಥ ಬಿ.ಆರ್. ರವಿಕಾಂತೇಗೌಡ ಅವರನ್ನು ಬೇಗ್ ಕೇಳಿದ್ದರು. ಆದರೆ, ಸಮಯಾವಕಾಶ ನೀಡಿಲ್ಲ ಎಂದು ಮೂಲಗಳು ಹೇಳಿವೆ.</p>.<p>‘ಕಾರಣಾಂತರಗಳಿಂದ ಗುರುವಾರ ತಮಗೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ,ಮುಂದಿನ ಸಲ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ಎಂದು ರೋಷನ್ಬೇಗ್ ಎಸ್ಐಟಿ ಮುಖ್ಯಸ್ಥರಿಗೆ ಬುಧವಾರ ಪತ್ರ ಬರೆದಿದ್ದರು.</p>.<p><strong>ವಿಜಯಶಂಕರ್ ಅಮಾನತು ಶ್ರೀನಿವಾಸ್ ನೂತನ ಜಿಲ್ಲಾಧಿಕಾರಿ</strong></p>.<p>ಐಎಂಎ ಸಮೂಹ ಕಂಪನಿಗೆ ‘ಕ್ಲೀನ್ ಚಿಟ್’ ನೀಡಲು ₹1.5 ಕೋಟಿ ಲಂಚ ಪಡೆದ ಆರೋಪದ ಮೇಲೆ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಬಂಧನಕ್ಕೆ ಒಳಗಾಗಿರುವ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಬಿ.ಎಂ. ವಿಜಯಶಂಕರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ನಗರ ಜಿಲ್ಲಾಧಿಕಾರಿಯಾಗಿ ಕೆ.ಶ್ರೀನಿವಾಸ್ ಅವರನ್ನು ಬುಧವಾರ ನೇಮಿಸಲಾಗಿದೆ.</p>.<p>ಜಿ. ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ರಾಯಚೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸ್ವಾಮಿ ಪಾಳ್ಯದ ಕಾರ್ಪೊರೇಟರ್ ನೇತ್ರಾವತಿ ಅವರ ಪತಿ ಕೃಷ್ಣೇಗೌಡ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಬುಧವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿತು.</p>.<p>ರಾಮಸ್ವಾಮಿ ಪಾಳ್ಯ ಬಿಬಿಎಂಪಿಯ 62ನೇ ವಾರ್ಡ್ ಆಗಿದ್ದು ಶಿವಾಜಿನಗರ ವಿಧಾನಸಭೆ ವ್ಯಾಪ್ತಿಗೆ ಸೇರಿದೆ. ಐಎಂಎ ಆರೋಪಿಗಳ ಜೊತೆ ರಾಮಸ್ವಾಮಿ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೃಷ್ಣೇಗೌಡರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ಎಸ್ಐಟಿ ಮೂಲಗಳು ತಿಳಿಸಿವೆ.</p>.<p>ಗುರುವಾರ ರೋಷನ್ ಬೇಗ್ ವಿಚಾರಣೆ: ಈ ಮಧ್ಯೆ, ಗುರುವಾರ ಬೆಳಿಗ್ಗೆ ವಿಚಾರಣೆಗಾಗಿ ಎಸ್ಐಟಿ ಮುಂದೆ ಶಿವಾಜಿ ನಗರದ ಶಾಸಕ ರೋಷನ್ ಬೇಗ್ ಹಾಜರಾಗಲಿದ್ದಾರೆ.</p>.<p>ವಿಚಾರಣೆಗೆ ಹಾಜರಾಗಲು ತಮಗೆ ಸ್ವಲ್ಪ ಕಾಲಾವಕಾಶ ನೀಡುವಂತೆ ಎಸ್ಐಟಿ ಮುಖ್ಯಸ್ಥ ಬಿ.ಆರ್. ರವಿಕಾಂತೇಗೌಡ ಅವರನ್ನು ಬೇಗ್ ಕೇಳಿದ್ದರು. ಆದರೆ, ಸಮಯಾವಕಾಶ ನೀಡಿಲ್ಲ ಎಂದು ಮೂಲಗಳು ಹೇಳಿವೆ.</p>.<p>‘ಕಾರಣಾಂತರಗಳಿಂದ ಗುರುವಾರ ತಮಗೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ,ಮುಂದಿನ ಸಲ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ಎಂದು ರೋಷನ್ಬೇಗ್ ಎಸ್ಐಟಿ ಮುಖ್ಯಸ್ಥರಿಗೆ ಬುಧವಾರ ಪತ್ರ ಬರೆದಿದ್ದರು.</p>.<p><strong>ವಿಜಯಶಂಕರ್ ಅಮಾನತು ಶ್ರೀನಿವಾಸ್ ನೂತನ ಜಿಲ್ಲಾಧಿಕಾರಿ</strong></p>.<p>ಐಎಂಎ ಸಮೂಹ ಕಂಪನಿಗೆ ‘ಕ್ಲೀನ್ ಚಿಟ್’ ನೀಡಲು ₹1.5 ಕೋಟಿ ಲಂಚ ಪಡೆದ ಆರೋಪದ ಮೇಲೆ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಬಂಧನಕ್ಕೆ ಒಳಗಾಗಿರುವ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಬಿ.ಎಂ. ವಿಜಯಶಂಕರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ನಗರ ಜಿಲ್ಲಾಧಿಕಾರಿಯಾಗಿ ಕೆ.ಶ್ರೀನಿವಾಸ್ ಅವರನ್ನು ಬುಧವಾರ ನೇಮಿಸಲಾಗಿದೆ.</p>.<p>ಜಿ. ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ರಾಯಚೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>