<p><strong>ಬೆಂಗಳೂರು:</strong> ಐಎಂಎ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಸಂಸ್ಥೆಗೆ ‘ಕರ್ನಾಟಕ ಹೂಡಿಕೆದಾರರ ಹಿತಾಸಕ್ತಿ ಸಂರಕ್ಷಣಾ (ಕೆಪಿಐಡಿ) ಕಾಯ್ದೆ’ಯಡಿ ಅಗತ್ಯ ಮೂಲಸೌಕರ್ಯ ಒದಗಿಸುವುದನ್ನು ಸರ್ಕಾರ ಮರೆಯಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ವೇತನವಲ್ಲದ ಅನುದಾನವನ್ನೂ ಸರ್ಕಾರ ಬಿಡುಗಡೆ ಮಾಡಿಲ್ಲ ಎಂಬುದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಅನುದಾನ ಬಿಡುಗಡೆ ಮತ್ತು ಮೂಲಸೌಕರ್ಯ ಒದಗಿಸಲು ವಿಳಂಬ ಮಾಡಿದರೆ ತನಿಖೆ ಮುಂದುವರಿಸಲು ಸಿಬಿಐಗೆ ಹೇಗೆ ಸಾಧ್ಯ’ ಎಂದು ಪ್ರಶ್ನಿಸಿತು.</p>.<p>‘ವಿಧಿವಿಜ್ಞಾನ ಲೆಕ್ಕಪರಿಶೋಧನೆಗೆ ಸಂಬಂಧಿಸಿದ ಡೇಟಾ ಸಂಗ್ರಹಿಸಲು ಈಗಾಗಲೇ ಹಣ ಖರ್ಚು ಮಾಡಲಾಗಿದೆ. ಸಿಬಿಐಗೆ ರಾಜ್ಯ ಸರ್ಕಾರ ₹12 ಲಕ್ಷ ಪಾವತಿಸಬೇಕಿದೆ. ಸಿಬಿಐ ಆರು ಅಧಿಕಾರಿಗಳಿಗೆ ಕೋವಿಡ್ ದೃಢಪಟ್ಟಿದ್ದು, ಅವರಲ್ಲಿ ಇನ್ನೂ ಇಬ್ಬರು ಕ್ವಾರಂಟೈನ್ನಲ್ಲಿ ಇದ್ದಾರೆ’ ಎಂದು ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್ ವಿವರಿಸಿದರು.</p>.<p>ತನಿಖೆ ಸ್ಥಿತಿಗತಿಯ ವರದಿಯನ್ನು ಡಿಸೆಂಬರ್ 7ರೊಳಗೆ ಸಲ್ಲಿಸಲು ಸಿಬಿಐಗೆ ಅವಕಾಶ ನೀಡಿದ ಪೀಠ, ‘ಅಗತ್ಯ ಹಣಕಾಸನ್ನು ಸಿಬಿಐಗೆ ಕೂಡಲೇ ಬಿಡುಗಡೆ ಮಾಡಬೇಕು. ಈ ಸಂಬಂಧ ವರದಿಯನ್ನು ನ.2ರೊಳಗೆ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಎಂಎ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಸಂಸ್ಥೆಗೆ ‘ಕರ್ನಾಟಕ ಹೂಡಿಕೆದಾರರ ಹಿತಾಸಕ್ತಿ ಸಂರಕ್ಷಣಾ (ಕೆಪಿಐಡಿ) ಕಾಯ್ದೆ’ಯಡಿ ಅಗತ್ಯ ಮೂಲಸೌಕರ್ಯ ಒದಗಿಸುವುದನ್ನು ಸರ್ಕಾರ ಮರೆಯಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ವೇತನವಲ್ಲದ ಅನುದಾನವನ್ನೂ ಸರ್ಕಾರ ಬಿಡುಗಡೆ ಮಾಡಿಲ್ಲ ಎಂಬುದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಅನುದಾನ ಬಿಡುಗಡೆ ಮತ್ತು ಮೂಲಸೌಕರ್ಯ ಒದಗಿಸಲು ವಿಳಂಬ ಮಾಡಿದರೆ ತನಿಖೆ ಮುಂದುವರಿಸಲು ಸಿಬಿಐಗೆ ಹೇಗೆ ಸಾಧ್ಯ’ ಎಂದು ಪ್ರಶ್ನಿಸಿತು.</p>.<p>‘ವಿಧಿವಿಜ್ಞಾನ ಲೆಕ್ಕಪರಿಶೋಧನೆಗೆ ಸಂಬಂಧಿಸಿದ ಡೇಟಾ ಸಂಗ್ರಹಿಸಲು ಈಗಾಗಲೇ ಹಣ ಖರ್ಚು ಮಾಡಲಾಗಿದೆ. ಸಿಬಿಐಗೆ ರಾಜ್ಯ ಸರ್ಕಾರ ₹12 ಲಕ್ಷ ಪಾವತಿಸಬೇಕಿದೆ. ಸಿಬಿಐ ಆರು ಅಧಿಕಾರಿಗಳಿಗೆ ಕೋವಿಡ್ ದೃಢಪಟ್ಟಿದ್ದು, ಅವರಲ್ಲಿ ಇನ್ನೂ ಇಬ್ಬರು ಕ್ವಾರಂಟೈನ್ನಲ್ಲಿ ಇದ್ದಾರೆ’ ಎಂದು ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್ ವಿವರಿಸಿದರು.</p>.<p>ತನಿಖೆ ಸ್ಥಿತಿಗತಿಯ ವರದಿಯನ್ನು ಡಿಸೆಂಬರ್ 7ರೊಳಗೆ ಸಲ್ಲಿಸಲು ಸಿಬಿಐಗೆ ಅವಕಾಶ ನೀಡಿದ ಪೀಠ, ‘ಅಗತ್ಯ ಹಣಕಾಸನ್ನು ಸಿಬಿಐಗೆ ಕೂಡಲೇ ಬಿಡುಗಡೆ ಮಾಡಬೇಕು. ಈ ಸಂಬಂಧ ವರದಿಯನ್ನು ನ.2ರೊಳಗೆ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>