<p><strong>ಬೆಂಗಳೂರು:</strong> ‘ಐಎಂಎ ಸಮೂಹ’ ಕಂಪನಿ ಮಾಲೀಕ ಮನ್ಸೂರ್ ಖಾನ್ ಅವರನ್ನು ಇ.ಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದು, ಇತ್ತ ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಕಂಪನಿ ಒಡೆತನದ ‘ಮಲ್ಬರಿ ಗ್ರೀನ್ಸ್’ ಮಳಿಗೆ ಮೇಲೆ ಶನಿವಾರ ದಾಳಿ ಮಾಡಿದರು.</p>.<p>ಇನ್ಫೆಂಟ್ರಿ ರಸ್ತೆಯಲ್ಲಿರುವ ಮಳಿಗೆಯ ಪ್ರಧಾನ ಕಚೇರಿಯಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಪರಿಶೀಲನೆ ನಡೆಸಿದ ಎಸ್ಐಟಿ ತಂಡ, ₹ 60 ಸಾವಿರ ಮೌಲ್ಯದ 300 ಬೆಳ್ಳಿ ನಾಣ್ಯಗಳು ಹಾಗೂ ₹ 52,030 ನಗದು ಜಪ್ತಿ ಮಾಡಿದೆ.</p>.<p>‘ಸಾವಿರಾರು ಜನರಿಂದ ಕೋಟ್ಯಂತರ ರೂಪಾಯಿ ಷೇರು ಸಂಗ್ರಹಿಸಿದ್ದ ಮನ್ಸೂರ್ ಖಾನ್, ಆ ಹಣದಲ್ಲೇ ‘ಮಲ್ಬರಿ ಗ್ರೀನ್’ ಮಳಿಗೆ ತೆರೆದಿದ್ದ. ಮಳಿಗೆಯ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿ ಕೆಲ ದಾಖಲೆಗಳನ್ನು ಸುಪರ್ದಿಗೆ ಪಡೆಯಲಾಗಿದೆ’ ಎಂದು ಎಸ್ಐಟಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p class="Subhead">₹ 4.62 ಕೋಟಿಗೆ ಡಿ.ಡಿ ನೀಡಿದ ‘ಅಡೊನೈ’: ‘ನಗರದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ‘ಐಎಂಎ ಸಮೂಹ’ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿದ್ದ ’ಅಡೊನೈ’ ಕಂಪನಿ, ಮನ್ಸೂರ್ ಖಾನ್ರಿಂದ ಪಡೆದಿದ್ದ ₹ 4. 60 ಕೋಟಿ ಹಣವನ್ನು ಡಿ.ಡಿ ಮೂಲಕ ಎಸ್ಐಟಿಗೆ ಶನಿವಾರ ಹಿಂತಿರುಗಿಸಿದೆ.</p>.<p>‘ಮೇಲ್ಸೇತುವೆ, ಸ್ಕೈವಾಕ್ಗಳನ್ನು ನಿರ್ಮಿಸಲು ಬಿಬಿಎಂಪಿ ಕಡೆಯಿಂದ ಐಎಂಎ ಸಮೂಹ ಸಂಸ್ಥೆಯು ಗುತ್ತಿಗೆ ಪಡೆದಿತ್ತು. ಕಾಮಗಾರಿ ಕೈಗೊಳ್ಳಲು ‘ಅಡೊನೈ’ ಕಂಪನಿ ಜೊತೆ ಕರಾರು ಸಹ ಮಾಡಿಕೊಂಡಿತ್ತು. ಕಂಪನಿಯ ಪ್ರತಿನಿಧಿಗಳು ಈಗಾಗಲೇ ₹ 1.5 ಕೋಟಿ ವಾಪಸ್ ನೀಡಿದ್ದರು. ಈಗ ಪುನಃ ₹ 4.62 ಕೋಟಿ ನೀಡಿದ್ದಾರೆ’ ಎಂದು ಅಧಿಕಾರಿ ಮಾಹಿತಿ ನೀಡಿದರು.</p>.<p><strong>ಇ.ಡಿ ಕಚೇರಿ ಎದುರು ಪ್ರತಿಭಟನೆ</strong></p>.<p>‘ಐಎಂಎ ಸಮೂಹ’ ಕಂಪನಿ ವಿರುದ್ಧದ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿ ಸಂತ್ರಸ್ತರು ನಗರದಲ್ಲಿರುವ ಇ.ಡಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಕಂಪನಿಯ ಮಾಲೀಕ ಮನ್ಸೂರ ಖಾನ್ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸುದ್ದಿ ತಿಳಿಯುತ್ತಿದ್ದಂತೆ ಕಚೇರಿ ಎದುರು ಸೇರಿದ್ದ ಸಂತ್ರಸ್ತರು, ‘ನಮ್ಮ ಹಣ ವಾಪಸ್ ಕೊಡಿಸಿ’ ಎಂದು ಘೋಷಣೆ ಕೂಗಿದರು.</p>.<p>‘ಕಂಪನಿಯಲ್ಲಿ ಹಣ ಹೂಡಿಕೆ ಮಾಡಿ ಬೀದಿಗೆ ಬಂದಿದ್ದೇವೆ. ನಮಗೆ ನ್ಯಾಯ ಬೇಕು. ಪ್ರಕರಣದ ಸಮಗ್ರ ತನಿಖೆ ನಡೆಸಿ ಹಣವನ್ನು ವಾಪಸ್ ಕೊಡಿಸುವ ಕೆಲಸವಾಗಬೇಕು. ಹೀಗಾಗಿ, ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಸಂತ್ರಸ್ತರು ಒತ್ತಾಯಿಸಿದರು.</p>.<p><strong>ಇನ್ನೂ ₹ 100 ಕೋಟಿ ಮೌಲ್ಯದ ಆಸ್ತಿ ಪತ್ತೆ</strong></p>.<p>ಮನ್ಸೂರ್ ಖಾನ್ ಅವರಿಗೆ ಸೇರಿದ ಇನ್ನೂ ₹ 100 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಪತ್ತೆ ಹಚ್ಚಿದ್ದು, ಒಂದೆರಡು ದಿನಗಳಲ್ಲಿ ಜಪ್ತಿ ಮಾಡುವ ನಿರೀಕ್ಷೆ ಇದೆ.</p>.<p>ಬೆಂಗಳೂರು, ದೆಹಲಿ ಸೇರಿದಂತೆ ಬೇರೆ ಬೇರೆ ಸ್ಥಳಗಳಲ್ಲಿ ಸುಮಾರು 30 ಆಸ್ತಿಗಳಿದ್ದು, ಇವುಗಳ ನಿಖರವಾದ ಮೌಲ್ಯವನ್ನು ಇನ್ನೂ ನಿರ್ಧರಿಸಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಶುಕ್ರವಾರ ಬೆಳಗಿನ ಜಾವ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮನ್ಸೂರ್ ಖಾನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ದೆಹಲಿ ಮತ್ತು ಚೆನ್ನೈಗಳಿಂದ ಬಂದಿರುವ ಇ.ಡಿ ಅಧಿಕಾರಿಗಳು ಶನಿವಾರ ಬೆಂಗಳೂರಿನಲ್ಲೂ ವಿಚಾರಣೆ ಮುಂದುವರಿಸಿದ್ದಾರೆ.</p>.<p>ಇ.ಡಿ ಈಗಾಗಲೇ ₹ 209 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. ‘ಮನ್ಸೂರ್ ಖಾನ್ ಅವರಿಗೆ ಸೇರಿರುವ ಆಸ್ತಿಗಳನ್ನು ಪತ್ತೆ ಹಚ್ಚಿ ಹಣ ಕಳೆದುಕೊಂಡವರಿಗೆ ಹಿಂತಿರುಗಿಸುವ ಮೂಲಕ ನ್ಯಾಯ ಒದಗಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ’ ಎಂದು ಇ.ಡಿ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಐಎಂಎ ಸಮೂಹ’ ಕಂಪನಿ ಮಾಲೀಕ ಮನ್ಸೂರ್ ಖಾನ್ ಅವರನ್ನು ಇ.ಡಿ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದು, ಇತ್ತ ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಕಂಪನಿ ಒಡೆತನದ ‘ಮಲ್ಬರಿ ಗ್ರೀನ್ಸ್’ ಮಳಿಗೆ ಮೇಲೆ ಶನಿವಾರ ದಾಳಿ ಮಾಡಿದರು.</p>.<p>ಇನ್ಫೆಂಟ್ರಿ ರಸ್ತೆಯಲ್ಲಿರುವ ಮಳಿಗೆಯ ಪ್ರಧಾನ ಕಚೇರಿಯಲ್ಲಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ಪರಿಶೀಲನೆ ನಡೆಸಿದ ಎಸ್ಐಟಿ ತಂಡ, ₹ 60 ಸಾವಿರ ಮೌಲ್ಯದ 300 ಬೆಳ್ಳಿ ನಾಣ್ಯಗಳು ಹಾಗೂ ₹ 52,030 ನಗದು ಜಪ್ತಿ ಮಾಡಿದೆ.</p>.<p>‘ಸಾವಿರಾರು ಜನರಿಂದ ಕೋಟ್ಯಂತರ ರೂಪಾಯಿ ಷೇರು ಸಂಗ್ರಹಿಸಿದ್ದ ಮನ್ಸೂರ್ ಖಾನ್, ಆ ಹಣದಲ್ಲೇ ‘ಮಲ್ಬರಿ ಗ್ರೀನ್’ ಮಳಿಗೆ ತೆರೆದಿದ್ದ. ಮಳಿಗೆಯ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿ ಕೆಲ ದಾಖಲೆಗಳನ್ನು ಸುಪರ್ದಿಗೆ ಪಡೆಯಲಾಗಿದೆ’ ಎಂದು ಎಸ್ಐಟಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p class="Subhead">₹ 4.62 ಕೋಟಿಗೆ ಡಿ.ಡಿ ನೀಡಿದ ‘ಅಡೊನೈ’: ‘ನಗರದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ‘ಐಎಂಎ ಸಮೂಹ’ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡಿದ್ದ ’ಅಡೊನೈ’ ಕಂಪನಿ, ಮನ್ಸೂರ್ ಖಾನ್ರಿಂದ ಪಡೆದಿದ್ದ ₹ 4. 60 ಕೋಟಿ ಹಣವನ್ನು ಡಿ.ಡಿ ಮೂಲಕ ಎಸ್ಐಟಿಗೆ ಶನಿವಾರ ಹಿಂತಿರುಗಿಸಿದೆ.</p>.<p>‘ಮೇಲ್ಸೇತುವೆ, ಸ್ಕೈವಾಕ್ಗಳನ್ನು ನಿರ್ಮಿಸಲು ಬಿಬಿಎಂಪಿ ಕಡೆಯಿಂದ ಐಎಂಎ ಸಮೂಹ ಸಂಸ್ಥೆಯು ಗುತ್ತಿಗೆ ಪಡೆದಿತ್ತು. ಕಾಮಗಾರಿ ಕೈಗೊಳ್ಳಲು ‘ಅಡೊನೈ’ ಕಂಪನಿ ಜೊತೆ ಕರಾರು ಸಹ ಮಾಡಿಕೊಂಡಿತ್ತು. ಕಂಪನಿಯ ಪ್ರತಿನಿಧಿಗಳು ಈಗಾಗಲೇ ₹ 1.5 ಕೋಟಿ ವಾಪಸ್ ನೀಡಿದ್ದರು. ಈಗ ಪುನಃ ₹ 4.62 ಕೋಟಿ ನೀಡಿದ್ದಾರೆ’ ಎಂದು ಅಧಿಕಾರಿ ಮಾಹಿತಿ ನೀಡಿದರು.</p>.<p><strong>ಇ.ಡಿ ಕಚೇರಿ ಎದುರು ಪ್ರತಿಭಟನೆ</strong></p>.<p>‘ಐಎಂಎ ಸಮೂಹ’ ಕಂಪನಿ ವಿರುದ್ಧದ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿ ಸಂತ್ರಸ್ತರು ನಗರದಲ್ಲಿರುವ ಇ.ಡಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಕಂಪನಿಯ ಮಾಲೀಕ ಮನ್ಸೂರ ಖಾನ್ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸುದ್ದಿ ತಿಳಿಯುತ್ತಿದ್ದಂತೆ ಕಚೇರಿ ಎದುರು ಸೇರಿದ್ದ ಸಂತ್ರಸ್ತರು, ‘ನಮ್ಮ ಹಣ ವಾಪಸ್ ಕೊಡಿಸಿ’ ಎಂದು ಘೋಷಣೆ ಕೂಗಿದರು.</p>.<p>‘ಕಂಪನಿಯಲ್ಲಿ ಹಣ ಹೂಡಿಕೆ ಮಾಡಿ ಬೀದಿಗೆ ಬಂದಿದ್ದೇವೆ. ನಮಗೆ ನ್ಯಾಯ ಬೇಕು. ಪ್ರಕರಣದ ಸಮಗ್ರ ತನಿಖೆ ನಡೆಸಿ ಹಣವನ್ನು ವಾಪಸ್ ಕೊಡಿಸುವ ಕೆಲಸವಾಗಬೇಕು. ಹೀಗಾಗಿ, ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಸಂತ್ರಸ್ತರು ಒತ್ತಾಯಿಸಿದರು.</p>.<p><strong>ಇನ್ನೂ ₹ 100 ಕೋಟಿ ಮೌಲ್ಯದ ಆಸ್ತಿ ಪತ್ತೆ</strong></p>.<p>ಮನ್ಸೂರ್ ಖಾನ್ ಅವರಿಗೆ ಸೇರಿದ ಇನ್ನೂ ₹ 100 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಪತ್ತೆ ಹಚ್ಚಿದ್ದು, ಒಂದೆರಡು ದಿನಗಳಲ್ಲಿ ಜಪ್ತಿ ಮಾಡುವ ನಿರೀಕ್ಷೆ ಇದೆ.</p>.<p>ಬೆಂಗಳೂರು, ದೆಹಲಿ ಸೇರಿದಂತೆ ಬೇರೆ ಬೇರೆ ಸ್ಥಳಗಳಲ್ಲಿ ಸುಮಾರು 30 ಆಸ್ತಿಗಳಿದ್ದು, ಇವುಗಳ ನಿಖರವಾದ ಮೌಲ್ಯವನ್ನು ಇನ್ನೂ ನಿರ್ಧರಿಸಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಶುಕ್ರವಾರ ಬೆಳಗಿನ ಜಾವ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮನ್ಸೂರ್ ಖಾನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ದೆಹಲಿ ಮತ್ತು ಚೆನ್ನೈಗಳಿಂದ ಬಂದಿರುವ ಇ.ಡಿ ಅಧಿಕಾರಿಗಳು ಶನಿವಾರ ಬೆಂಗಳೂರಿನಲ್ಲೂ ವಿಚಾರಣೆ ಮುಂದುವರಿಸಿದ್ದಾರೆ.</p>.<p>ಇ.ಡಿ ಈಗಾಗಲೇ ₹ 209 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. ‘ಮನ್ಸೂರ್ ಖಾನ್ ಅವರಿಗೆ ಸೇರಿರುವ ಆಸ್ತಿಗಳನ್ನು ಪತ್ತೆ ಹಚ್ಚಿ ಹಣ ಕಳೆದುಕೊಂಡವರಿಗೆ ಹಿಂತಿರುಗಿಸುವ ಮೂಲಕ ನ್ಯಾಯ ಒದಗಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ’ ಎಂದು ಇ.ಡಿ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>