ಸಂಘದ ಅಧ್ಯಕ್ಷ ಡಾ.ಎಸ್. ಶ್ರೀನಿವಾಸ್, ‘ಮೈಸೂರು, ಮಂಡ್ಯ, ಹೊಸಕೋಟೆ ಮತ್ತು ಬೆಂಗಳೂರಿನಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆಯ ಪ್ರಕರಣಗಳು ವೈದ್ಯಕೀಯ ಕ್ಷೇತ್ರದ ವ್ಯಾಪಕ ಕೊಳಕು ದುಷ್ಕೃತ್ಯಗಳನ್ನು ಬಹಿರಂಗಪಡಿಸಿದೆ. ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಇಂತಹ ಕೃತ್ಯಗಳಲ್ಲಿ ತೊಡಗುವುದನ್ನು ಎಂದಿಗೂ ನಾವೂ ಬೆಂಬಲಿಸುವುದಿಲ್ಲ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.