<p><strong>ಬೆಂಗಳೂರು:</strong>‘ಐಎಂಎ ಸಮೂಹ’ ಕಂಪನಿ ಮಾಲೀಕ ಮನ್ಸೂರ್ ಖಾನ್,‘ಎದೆ ನೋಯುತ್ತಿದೆ’ ಎಂದು ನರಳಾಡಿದ್ದರಿಂದಾಗಿ ಭಾನುವಾರ ಜಯದೇವ ಆಸ್ಪತ್ರೆಗೆ ಕರೆತಂದು ತಪಾಸಣೆಗೆ ಒಳಪಡಿಸಲಾಯಿತು.</p>.<p>ಮನ್ಸೂರ್ ಖಾನ್ ಅವರನ್ನು ಕಸ್ಟಡಿಗೆ ಪಡೆದಿರುವ ಇ.ಡಿ ಅಧಿಕಾರಿಗಳು, ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ‘ಎದೆ ನೋವು ಕಾಣಿಸಿಕೊಂಡಿದೆ’ ಎಂದು ನರಳಲು ಆರಂಭಿಸಿದ್ದ ಆರೋಪಿ, ‘ಆಸ್ಪತ್ರೆಗೆ ಕರೆದೊಯ್ಯಿರಿ’ ಎಂದು ಪಟ್ಟು ಹಿಡಿದಿದ್ದರು.</p>.<p>ಕೂಡಲೇ ಇ.ಡಿ ಅಧಿಕಾರಿಗಳು, ಮನ್ಸೂರ್ ಖಾನ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ತಪಾಸಣೆ ನಡೆಸಿದ ವೈದ್ಯರು, ‘ಯಾವುದೇ ತೊಂದರೆ ಕಾಣಿಸುತ್ತಿಲ್ಲ’ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.</p>.<p>ಇ.ಡಿ ಅಧಿಕಾರಿಗಳು, ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೆ ಒಳಪಡಿಸಿದರು. ತಡರಾತ್ರಿವರೆಗೂ ಖಾನ್ ಅವರ ಆರೋಗ್ಯ ತಪಾಸಣೆ ಪ್ರಕ್ರಿಯೆ ನಡೆಯಿತು.</p>.<p>‘ವಿಚಾರಣೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಆರೋಪಿ, ಎದೆನೋವು ಎಂದು ನಾಟಕವಾಡುತ್ತಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರ ವರದಿಯ ಬಳಿಕ ನಿಜಾಂಶ ತಿಳಿಯಲಿದೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಐಎಂಎ ಸಮೂಹ’ ಕಂಪನಿ ಮಾಲೀಕ ಮನ್ಸೂರ್ ಖಾನ್,‘ಎದೆ ನೋಯುತ್ತಿದೆ’ ಎಂದು ನರಳಾಡಿದ್ದರಿಂದಾಗಿ ಭಾನುವಾರ ಜಯದೇವ ಆಸ್ಪತ್ರೆಗೆ ಕರೆತಂದು ತಪಾಸಣೆಗೆ ಒಳಪಡಿಸಲಾಯಿತು.</p>.<p>ಮನ್ಸೂರ್ ಖಾನ್ ಅವರನ್ನು ಕಸ್ಟಡಿಗೆ ಪಡೆದಿರುವ ಇ.ಡಿ ಅಧಿಕಾರಿಗಳು, ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ‘ಎದೆ ನೋವು ಕಾಣಿಸಿಕೊಂಡಿದೆ’ ಎಂದು ನರಳಲು ಆರಂಭಿಸಿದ್ದ ಆರೋಪಿ, ‘ಆಸ್ಪತ್ರೆಗೆ ಕರೆದೊಯ್ಯಿರಿ’ ಎಂದು ಪಟ್ಟು ಹಿಡಿದಿದ್ದರು.</p>.<p>ಕೂಡಲೇ ಇ.ಡಿ ಅಧಿಕಾರಿಗಳು, ಮನ್ಸೂರ್ ಖಾನ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ತಪಾಸಣೆ ನಡೆಸಿದ ವೈದ್ಯರು, ‘ಯಾವುದೇ ತೊಂದರೆ ಕಾಣಿಸುತ್ತಿಲ್ಲ’ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.</p>.<p>ಇ.ಡಿ ಅಧಿಕಾರಿಗಳು, ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೆ ಒಳಪಡಿಸಿದರು. ತಡರಾತ್ರಿವರೆಗೂ ಖಾನ್ ಅವರ ಆರೋಗ್ಯ ತಪಾಸಣೆ ಪ್ರಕ್ರಿಯೆ ನಡೆಯಿತು.</p>.<p>‘ವಿಚಾರಣೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಆರೋಪಿ, ಎದೆನೋವು ಎಂದು ನಾಟಕವಾಡುತ್ತಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರ ವರದಿಯ ಬಳಿಕ ನಿಜಾಂಶ ತಿಳಿಯಲಿದೆ’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>