ಶಿವಾಜಿನಗರದ ಒಪಿಎಚ್ ರಸ್ತೆಯಲ್ಲಿರುವ ಬೇಪಾರಿಯನ್ ಮಸೀದಿಯ ಮೌಲ್ವಿ (ಧರ್ಮಗುರು) ಹನೀಫ್, ಐಎಂಎ ಬಗ್ಗೆ ಪ್ರಚಾರ ಮಾಡುತ್ತಿದ್ದ. ಆ ಮೂಲಕ, ಕಂಪನಿಯಲ್ಲಿ ಬಂಡವಾಳ ಹೂಡಿಕೆ ಮಾಡುತ್ತಿದ್ದ. ಮೌಲ್ವಿ ಅವರನ್ನು ಖುಷಿಪಡಿಸುವುದಕ್ಕಾಗಿ ಮನ್ಸೂರ್ ಖಾನ್, ₹ 3 ಕೋಟಿ ಮೌಲ್ಯದ ಮನೆಯನ್ನು ಉಡುಗೊರೆಯಾಗಿ ಕೊಟ್ಟಿದ್ದ. ಈ ಆಸ್ತಿಯನ್ನು ಕೆಪಿಐಡಿ ಕಾಯ್ದೆ– 2004 ಅಡಿ ಸಕ್ಷಮ ಪ್ರಾಧಿಕಾರ ಈಗಾಗಲೇ ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೆ, ತನ್ನ ಕೆಲಸಕ್ಕೆ ಮೌಲ್ವಿ ಹಣವನ್ನೂ ಪಡೆಯುತ್ತಿದ್ದ.