ಈ ಬಗ್ಗೆ ಮಾತನಾಡಿದ ಉತ್ತರ ಪ್ರದೇಶ ಸರ್ಕಾರದ ವಕ್ತಾರ, ಸದ್ಯ ಯೋಜನೆಯನ್ನು ರದ್ದು ಮಾಡಿಲ್ಲ. ಆದಿತ್ಯನಾಥ ಅವರು ಆಚಾರ್ಯ ಬಾಲಕೃಷ್ಣ ಅವರಲ್ಲಿ ಮಾತನಾಡಿದ್ದಾರೆ. ಇಲ್ಲಿಯವರೆಗೆ ಫುಡ್ ಪಾರ್ಕ್ ರದ್ದು ಮಾಡುವ ವಿಚಾರದ ಬಗ್ಗೆ ತೀರ್ಮಾನ ಆಗಿಲ್ಲ. ನಾವು ಈಗಾಗಲೇ ಇದಕ್ಕೆ ಬೇಕಾಗಿರುವ ಸ್ಥಳವನ್ನು ನೀಡಿದ್ದು, ಈ ಯೋಜನೆ ಕಾರ್ಯಗತವಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ (ಮಾಹಿತಿ) ಅವಾಂಶಿ ಅವಸ್ತಿ ಹೇಳಿದ್ದಾರೆ.