<p>ಬೆಂಗಳೂರು: ‘ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುವ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು’ ಎಂದು ರೋಹಿತ್ ಕಾಯ್ದೆಗಾಗಿ ಜನಾಂದೋಲನ ಕರ್ನಾಟಕ ಆಗ್ರಹಿಸಿದೆ. </p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಜನಾಂದೋಲನದ ಪರವಾಗಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ‘ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ತಾರತಮ್ಯ ನಿವಾರಣೆಗೆ ಈ ಕಾಯ್ದೆ ಸಹಕಾರಿ. ಕಾಂಗ್ರೆಸ್ ಪಕ್ಷವು 2024ರ ಚುನಾವಣಾ ಪ್ರಣಾಳಿಕೆಯಲ್ಲಿ ಈ ಕಾಯ್ದೆ ಜಾರಿಗೊಳಿಸುವ ಭರವಸೆ ನೀಡಿತ್ತು. 2025ರ ಏಪ್ರಿಲ್ನಲ್ಲಿ ರಾಹುಲ್ ಗಾಂಧಿ ಅವರ ಕರೆಗೆ ಸ್ಪಂದಿಸಿದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಮಾಡು ವುದಾಗಿ ಸಾರ್ವಜನಿಕವಾಗಿ ಭರವಸೆ ನೀಡಿದ್ದರು. ಉನ್ನತ ಶಿಕ್ಷಣದಲ್ಲಿ ಜಾತಿ ತಾರತಮ್ಯ ಎದುರಿಸುತ್ತಿರುವವರಿಗೆ ಹೊಸ ಭರವಸೆ ಮೂಡಿಸಿತ್ತು. ಆದರೆ, ಈವರೆಗೂ ಮಸೂದೆಯ ಕರಡನ್ನು ಸಾರ್ವಜನಿಕವಾಗಿ ಚರ್ಚೆಗೆ ಬಿಡುಗಡೆ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. </p>.<p>‘ಈ ಕಾಯ್ದೆಯನ್ನು ಜಾರಿಗೊಳಿಸುವಂತೆ ಸಿದ್ದರಾಮಯ್ಯ ಅವರು ಸೂಚಿಸುವ ಜತೆಗೆ, ಬಜೆಟ್ ಅಧಿವೇಶನದಲ್ಲಿ ಘೋಷಿಸಬೇಕು. ವಿಧಾನಸಭೆಯಲ್ಲಿ ಇದನ್ನು ಮಂಡಿಸಲು ಮತ್ತು ಅಂಗೀಕರಿಸಲು ಸ್ಪಷ್ಟವಾದ ವೇಳಾಪಟ್ಟಿ ಘೋಷಿಸಬೇಕು’ ಎಂದು ಆಗ್ರಹಿಸಿದರು. </p>.<p>ಸುದ್ದಿಗೋಷ್ಠಿಯಲ್ಲಿ ಆಂದೋಲನದ ಪರವಾಗಿ ಬಸವರಾಜ್ ಕೌತಾಳ್, ಹುಲಿಕುಂಟೆ ಮೂರ್ತಿ, ರಾಹುಲ್, ಲೇಖಾ ಮತ್ತು ಆಶ್ನಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುವ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು’ ಎಂದು ರೋಹಿತ್ ಕಾಯ್ದೆಗಾಗಿ ಜನಾಂದೋಲನ ಕರ್ನಾಟಕ ಆಗ್ರಹಿಸಿದೆ. </p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಜನಾಂದೋಲನದ ಪರವಾಗಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ‘ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ತಾರತಮ್ಯ ನಿವಾರಣೆಗೆ ಈ ಕಾಯ್ದೆ ಸಹಕಾರಿ. ಕಾಂಗ್ರೆಸ್ ಪಕ್ಷವು 2024ರ ಚುನಾವಣಾ ಪ್ರಣಾಳಿಕೆಯಲ್ಲಿ ಈ ಕಾಯ್ದೆ ಜಾರಿಗೊಳಿಸುವ ಭರವಸೆ ನೀಡಿತ್ತು. 2025ರ ಏಪ್ರಿಲ್ನಲ್ಲಿ ರಾಹುಲ್ ಗಾಂಧಿ ಅವರ ಕರೆಗೆ ಸ್ಪಂದಿಸಿದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಮಾಡು ವುದಾಗಿ ಸಾರ್ವಜನಿಕವಾಗಿ ಭರವಸೆ ನೀಡಿದ್ದರು. ಉನ್ನತ ಶಿಕ್ಷಣದಲ್ಲಿ ಜಾತಿ ತಾರತಮ್ಯ ಎದುರಿಸುತ್ತಿರುವವರಿಗೆ ಹೊಸ ಭರವಸೆ ಮೂಡಿಸಿತ್ತು. ಆದರೆ, ಈವರೆಗೂ ಮಸೂದೆಯ ಕರಡನ್ನು ಸಾರ್ವಜನಿಕವಾಗಿ ಚರ್ಚೆಗೆ ಬಿಡುಗಡೆ ಮಾಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು. </p>.<p>‘ಈ ಕಾಯ್ದೆಯನ್ನು ಜಾರಿಗೊಳಿಸುವಂತೆ ಸಿದ್ದರಾಮಯ್ಯ ಅವರು ಸೂಚಿಸುವ ಜತೆಗೆ, ಬಜೆಟ್ ಅಧಿವೇಶನದಲ್ಲಿ ಘೋಷಿಸಬೇಕು. ವಿಧಾನಸಭೆಯಲ್ಲಿ ಇದನ್ನು ಮಂಡಿಸಲು ಮತ್ತು ಅಂಗೀಕರಿಸಲು ಸ್ಪಷ್ಟವಾದ ವೇಳಾಪಟ್ಟಿ ಘೋಷಿಸಬೇಕು’ ಎಂದು ಆಗ್ರಹಿಸಿದರು. </p>.<p>ಸುದ್ದಿಗೋಷ್ಠಿಯಲ್ಲಿ ಆಂದೋಲನದ ಪರವಾಗಿ ಬಸವರಾಜ್ ಕೌತಾಳ್, ಹುಲಿಕುಂಟೆ ಮೂರ್ತಿ, ರಾಹುಲ್, ಲೇಖಾ ಮತ್ತು ಆಶ್ನಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>