ಸರೋಜಿನಿ ಮಹಿಷಿ ವರದಿ ಸಲ್ಲಿಕೆಯಾಗಿ ಮೂರು ದಶಕಗಳು ಕಳೆದರೂ ಅದು ಜಾರಿಗೆ ಬಂದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಲೇ ಈ ವರದಿ ದೂಳು ಹಿಡಿದಿದೆ. ತಮಿಳುನಾಡು, ಮಹಾರಾಷ್ಟ್ರ, ಒಡಿಶಾಗಳಲ್ಲಿ ಶೇ 90ರಷ್ಟು ಸ್ಥಳೀಯರಿಗೇ ಉದ್ಯೋಗಾವಕಾಶ ಕೊಡಲಾಗಿದೆ. ರಾಜ್ಯದಲ್ಲೂ ಈ ವ್ಯವಸ್ಥೆ ಜಾರಿಗೆ ಬರಲು ಒಗ್ಗಟ್ಟಿನ ಹೋರಾಟ ಅಗತ್ಯ ಎಂದು ಧರಣಿ ನಿರತರು ಆಗ್ರಹಿಸಿದರು.