‘ನಗರದಲ್ಲಿನ ಕೆರೆಗಳ ಮಾಲಿನ್ಯಕ್ಕೆ, ಅದರಲ್ಲೂ ಬೆಳ್ಳಂದೂರು ಕೆರೆ ಕಲುಷಿತಗೊಳ್ಳಲು ನೀರಿನಲ್ಲಿ ಫಾಸ್ಪೇಟ್ ಯುಕ್ತ ಡಿಟರ್ಜೆಂಟ್ನ ಪ್ರಮಾಣ ಹೆಚ್ಚುತ್ತಿರುವುದೇ ಕಾರಣ. ಈ ಸಂಬಂಧ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಡಿಟರ್ಜೆಂಟ್ ನಿಷೇಧ ಸಂಬಂಧ ಕೇಂದ್ರ ರಾಸಾಯನಿಕ ಸಚಿವ ಡಿ.ವಿ. ಸದಾನಂದಗೌಡ ಮೇಲೆ ಒತ್ತಡ ಹೇರುವ ಅಗತ್ಯವಿದೆ’ ಎಂದು ಅವರು ಹೇಳಿದರು.