‘ಮಳೆಯ ಪ್ರಮಾಣದಲ್ಲಿ ಏರುಪೇರು ಉಂಟಾಗುವುದರಿಂದ ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನೀರಿನ ಲಭ್ಯತೆ ಕ್ಷೀಣಿಸಲಿದೆ. ಹವಾಮಾನ ವೈಪರೀತ್ಯದಿಂದಾಗಿ ಭಾರತದ ಕೃಷಿ ವಲಯ ಮತ್ತು ಜಲಮೂಲಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ. 2040ರ ವೇಳೆಗೆ ಜಾಗತಿಕ ತಾಪಮಾನ 1.5 ಡಿಗ್ರಿ ಸೆಲ್ಸಿಯಸ್ಗೆ ಏರಿಕೆ ಆಗಲಿದ್ದು, ಮಹಾ ದುರಂತವೊಂದಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಇದರಿಂದ ದೇಶದ ಆರ್ಥಿಕತೆಗೂ ದೊಡ್ಡ ಪೆಟ್ಟು ಬೀಳಲಿದೆ’ ಎಂದರು.