<p><strong>ರಾಜರಾಜೇಶ್ವರಿನಗರ</strong>: ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಬೇಡಿಕೆ ಹೆಚ್ಚಿದ್ದು, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿ.(ಎಂಇಐ) ಮತ್ತು ಕರ್ನಾಟಕ ವಿದ್ಯುತ್ ಕಾರ್ಖಾನೆ (ಕವಿಕಾ) ಸಂಸ್ಥೆಗಳು ಬೇಡಿಕೆಯನ್ನು ಪೂರೈಸಲಿವೆ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.</p>.<p>ಎಂಇಐ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯುತ್ ಪರಿವರ್ತಕಗಳ ದುರಸ್ತಿ ಘಟಕ ಉದ್ಘಾಟಿಸಿ ಮತ್ತು ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು</p>.<p>‘ಹೊಸ ಹೊಸ ಯೋಜನೆಗಳ ಕೈಗೊಳ್ಳುವ ಕುರಿತು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ವಿದ್ಯುತ್ ಪರಿವರ್ತಕಗಳ ದುರಸ್ತಿಗಾಗಿ ಹೊಸ ಘಟಕ ಉದ್ಘಾಟನೆಯಾಗಿದೆ. ಕಾರ್ಮಿಕರು ಸಂಸ್ಥೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಸಂಸ್ಥೆಗಳು ಲಾಭದಾಯಕ ಸ್ಥಿತಿಯಲ್ಲಿವೆ’ ಎಂದರು.</p>.<p>’ಮಳೆಯಿಂದ ವಿದ್ಯುತ್ ಪರಿಕರಗಳಿಗೆ ಎಷ್ಟೇ ಸಮಸ್ಯೆಯಾದರೂ ಅದನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>ಎಂಇಐ ಅಧ್ಯಕ್ಷ ಎಸ್.ಮನೋಹರ್ ಮಾತನಾಡಿ, ‘ಸಂಸ್ಥೆ ಈ ವರ್ಷ ₹ 24ಕೋಟಿ ಲಾಭದಲ್ಲಿದೆ. ಸಂಸ್ಥೆಯಲ್ಲಿಯೇ ವಿದ್ಯುತ್ ಪರಿವರ್ತಕಗಳ ದುರಸ್ತಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಂಇಐ ವತಿಯಿಂದಲೇ ಚಿತ್ರದುರ್ಗ, ಮೈಸೂರು, ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ’ ಎಂದರು.</p>.<p>‘ಕವಿಕಾ ಮತ್ತು ಎಂಇಐ ಸಂಸ್ಥೆಗಳು ರಾಜ್ಯಕ್ಕೆ ಅಗತ್ಯವಿರುವಷ್ಟು ಪರಿವರ್ತಕಗಳನ್ನು ನೀಡಲು ಸಿದ್ದವಿವೆ. ಖಾಸಗಿಯವರಿಗೆ ಗುತ್ತಿಗೆ ನೀಡುವುದನ್ನು ನಿಲ್ಲಿಸಿದರೆ ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಸರ್ಕಾರಕ್ಕೆ ಉಳಿತಾಯವಾಗಲಿದೆ’ ಎಂದರು.</p>.<p>ಇಂದನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿದೇರ್ಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್.ಎನ್, ಎಂಇಐ ವ್ಯವಸ್ಥಾಪಕ ನಿರ್ದೇಶಕಿ ಡಿ.ಪದ್ಮಾವತಿ ಕಾರ್ಯಕ್ರಮದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ</strong>: ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಬೇಡಿಕೆ ಹೆಚ್ಚಿದ್ದು, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿ.(ಎಂಇಐ) ಮತ್ತು ಕರ್ನಾಟಕ ವಿದ್ಯುತ್ ಕಾರ್ಖಾನೆ (ಕವಿಕಾ) ಸಂಸ್ಥೆಗಳು ಬೇಡಿಕೆಯನ್ನು ಪೂರೈಸಲಿವೆ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.</p>.<p>ಎಂಇಐ ಆವರಣದಲ್ಲಿ ಹಮ್ಮಿಕೊಂಡಿದ್ದ ವಿದ್ಯುತ್ ಪರಿವರ್ತಕಗಳ ದುರಸ್ತಿ ಘಟಕ ಉದ್ಘಾಟಿಸಿ ಮತ್ತು ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು</p>.<p>‘ಹೊಸ ಹೊಸ ಯೋಜನೆಗಳ ಕೈಗೊಳ್ಳುವ ಕುರಿತು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ವಿದ್ಯುತ್ ಪರಿವರ್ತಕಗಳ ದುರಸ್ತಿಗಾಗಿ ಹೊಸ ಘಟಕ ಉದ್ಘಾಟನೆಯಾಗಿದೆ. ಕಾರ್ಮಿಕರು ಸಂಸ್ಥೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಸಂಸ್ಥೆಗಳು ಲಾಭದಾಯಕ ಸ್ಥಿತಿಯಲ್ಲಿವೆ’ ಎಂದರು.</p>.<p>’ಮಳೆಯಿಂದ ವಿದ್ಯುತ್ ಪರಿಕರಗಳಿಗೆ ಎಷ್ಟೇ ಸಮಸ್ಯೆಯಾದರೂ ಅದನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದರು.</p>.<p>ಎಂಇಐ ಅಧ್ಯಕ್ಷ ಎಸ್.ಮನೋಹರ್ ಮಾತನಾಡಿ, ‘ಸಂಸ್ಥೆ ಈ ವರ್ಷ ₹ 24ಕೋಟಿ ಲಾಭದಲ್ಲಿದೆ. ಸಂಸ್ಥೆಯಲ್ಲಿಯೇ ವಿದ್ಯುತ್ ಪರಿವರ್ತಕಗಳ ದುರಸ್ತಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಂಇಐ ವತಿಯಿಂದಲೇ ಚಿತ್ರದುರ್ಗ, ಮೈಸೂರು, ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ವಿದ್ಯುತ್ ಪರಿವರ್ತಕಗಳ ದುರಸ್ತಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ’ ಎಂದರು.</p>.<p>‘ಕವಿಕಾ ಮತ್ತು ಎಂಇಐ ಸಂಸ್ಥೆಗಳು ರಾಜ್ಯಕ್ಕೆ ಅಗತ್ಯವಿರುವಷ್ಟು ಪರಿವರ್ತಕಗಳನ್ನು ನೀಡಲು ಸಿದ್ದವಿವೆ. ಖಾಸಗಿಯವರಿಗೆ ಗುತ್ತಿಗೆ ನೀಡುವುದನ್ನು ನಿಲ್ಲಿಸಿದರೆ ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಸರ್ಕಾರಕ್ಕೆ ಉಳಿತಾಯವಾಗಲಿದೆ’ ಎಂದರು.</p>.<p>ಇಂದನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿದೇರ್ಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್.ಎನ್, ಎಂಇಐ ವ್ಯವಸ್ಥಾಪಕ ನಿರ್ದೇಶಕಿ ಡಿ.ಪದ್ಮಾವತಿ ಕಾರ್ಯಕ್ರಮದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>