ಯಲಹಂಕ: ದೇಶದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ರಂಗಗಳ ಅಭಿವೃದ್ಧಿಗೆ ಬ್ರಾಹ್ಮಣ ಸಮುದಾಯವು ತನ್ನದೇ ಕೊಡುಗೆಗಳನ್ನು ನೀಡುತ್ತಾ ಬಂದಿದೆ ಎಂದು ಶಾಸಕ ಎಸ್. ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು.
ಯಲಹಂಕ ತಾಲ್ಲೂಕು ಬ್ರಾಹ್ಮಣ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಮಾಜವಾದ ಹಾಗೂ ಕೆಲವು ಪ್ರಗತಿಪರ ಸಂಘಟನೆಗಳ ಧೋರಣೆಗಳಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣವರ್ಗ ತೊಂದರೆ ಅನುಭವಿಸಬೇಕಾಗಿದೆ ಎಂದರು.
ಬ್ರಾಹ್ಮಣ ವಿಧವೆಯರು ಹಾಗೂ ಹಿರಿಯ ನಾಗರಿಕರಿಗೆ ಆಶ್ರಯ ಯೋಜನೆಯಡಿಯಲ್ಲಿ 5 ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ವಿಶ್ವನಾಥ್ ಭರವಸೆ ನೀಡಿದರು.
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದಮೂರ್ತಿಮಾತನಾಡಿ, ಸಂಘವು ತಾಲ್ಲೂಕು ಮಟ್ಟದಲ್ಲಿ ವಿಸ್ತರಣೆಯಾಗಿರುವುದರಿಂದ ತಾಲ್ಲೂಕಿನ ಬ್ರಾಹ್ಮಣ ಸಮುದಾಯಕ್ಕೆ ಅನುಕೂಲವಾಗಲಿದೆ. ಬ್ರಾಹ್ಮಣರು ಕೀಳರಿಮೆ ಬಿಟ್ಟು ಸ್ವಾಭಿಮಾನಿಗಳಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.