<p><strong>ಬೆಂಗಳೂರು</strong>: ದೇಶದಲ್ಲೇ ಪ್ರಪ್ರಥಮ ಬಾರಿಗೆ, ಮಲ್ಲೇಶ್ವರದಲ್ಲಿ ನಿರ್ಮಿಸಿರುವ 500 ಕೆವಿಎ ನೆಲದಡಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರದ ಉದ್ಘಾಟನೆ ಸೆ.5ರಂದು ನಡೆಯಲಿದೆ.</p>.<p>ಬೆಸ್ಕಾಂ ಮತ್ತು ಬಿಬಿಎಂಪಿ ಸಹಭಾಗಿತ್ವದಲ್ಲಿ ಈ ಕೇಂದ್ರವನ್ನು ನಿರ್ಮಿಸಲಾಗಿದೆ. ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಈ ಕೇಂದ್ರವನ್ನು ಲೋಕಾರ್ಪಣೆ ಮಾಡಲಿದ್ದಾರೆ.</p>.<p>ನಗರದಲ್ಲಿ ಮೇಲ್ಮಾರ್ಗದ ಎಚ್ಟಿ ವಿದ್ಯುತ್ ತಂತಿಗಳನ್ನು ಭೂಗತವಾಗಿ ಪರಿವರ್ತಿಸುವ ಯೋಜನೆಯನ್ನು ಬೆಸ್ಕಾಂ ಈಗಾಗಲೇ ಕಾರ್ಯಗತಗೊಳಿಸಿದೆ. ನೆಲದಡಿಯಲ್ಲಿ ಕೇಬಲ್ ಹಾಗೂ ವಿದ್ಯುತ್ ಪರಿವರ್ತಕ ವ್ಯವಸ್ಥೆಯು ಸುರಕ್ಷತೆ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಸಹಕಾರಿಯಾಗಲಿದೆ.</p>.<p>ಒಟ್ಟು ₹1.97 ಕೋಟಿ ವೆಚ್ಚದಲ್ಲಿ ಈ ಪರಿವರ್ತಕ ಕೇಂದ್ರವನ್ನು (ಟಿಸಿ)ಯನ್ನು ನಿರ್ಮಿಸಲಾಗಿದ್ದು. ಈ ಪೈಕಿ ಸಿವಿಲ್ ಕಾಮಗಾರಿಗೆ ₹64 ಲಕ್ಷ ವೆಚ್ಚ ತಗಲಿದ್ದು, ಎಲೆಕ್ಟ್ರಿಕಲ್ ಕಾಮಗಾರಿಗೆ ₹1.33 ಕೋಟಿ ವೆಚ್ಚವಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.</p>.<p>ಈ ಕಾಮಗಾರಿ 2022ರ ಮೇ 20ರಂದು ಆರಂಭಗೊಂಡಿತ್ತು. ಸಿವಿಲ್ ಕಾಮಗಾರಿಗೆ ಬಿಬಿಎಂಪಿ ಅನುದಾನ ಒದಗಿಸಿತ್ತು.</p>.<p>ಮಲ್ಲೇಶ್ವರದ 15ನೇ ಅಡ್ಡರಸ್ತೆ ಬಳಿ ನಿರ್ಮಿಸಿರುವ ನೆಲದಡಿಯಲ್ಲಿ ಪರಿವರ್ತಕದ ಟ್ರಾನ್ಸ್ಫಾರ್ಮರ್ ಉದ್ದ 14 ಮೀಟರ್, ಅಗಲ 5 ಮೀಟರ್ ಹಾಗೂ ಆಳ 4 ಮೀಟರ್ಗಳಷ್ಟಿದೆ.</p>.<p>ಲೋಕಾರ್ಪಣೆ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಮಲ್ಲೇಶ್ವರದ 15ನೇ ಅಡ್ಡ ರಸ್ತೆಯಲ್ಲಿ ಆಯೋಜಿಸಲಾಗಿದ್ದು, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇಶದಲ್ಲೇ ಪ್ರಪ್ರಥಮ ಬಾರಿಗೆ, ಮಲ್ಲೇಶ್ವರದಲ್ಲಿ ನಿರ್ಮಿಸಿರುವ 500 ಕೆವಿಎ ನೆಲದಡಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರದ ಉದ್ಘಾಟನೆ ಸೆ.5ರಂದು ನಡೆಯಲಿದೆ.</p>.<p>ಬೆಸ್ಕಾಂ ಮತ್ತು ಬಿಬಿಎಂಪಿ ಸಹಭಾಗಿತ್ವದಲ್ಲಿ ಈ ಕೇಂದ್ರವನ್ನು ನಿರ್ಮಿಸಲಾಗಿದೆ. ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಈ ಕೇಂದ್ರವನ್ನು ಲೋಕಾರ್ಪಣೆ ಮಾಡಲಿದ್ದಾರೆ.</p>.<p>ನಗರದಲ್ಲಿ ಮೇಲ್ಮಾರ್ಗದ ಎಚ್ಟಿ ವಿದ್ಯುತ್ ತಂತಿಗಳನ್ನು ಭೂಗತವಾಗಿ ಪರಿವರ್ತಿಸುವ ಯೋಜನೆಯನ್ನು ಬೆಸ್ಕಾಂ ಈಗಾಗಲೇ ಕಾರ್ಯಗತಗೊಳಿಸಿದೆ. ನೆಲದಡಿಯಲ್ಲಿ ಕೇಬಲ್ ಹಾಗೂ ವಿದ್ಯುತ್ ಪರಿವರ್ತಕ ವ್ಯವಸ್ಥೆಯು ಸುರಕ್ಷತೆ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಸಹಕಾರಿಯಾಗಲಿದೆ.</p>.<p>ಒಟ್ಟು ₹1.97 ಕೋಟಿ ವೆಚ್ಚದಲ್ಲಿ ಈ ಪರಿವರ್ತಕ ಕೇಂದ್ರವನ್ನು (ಟಿಸಿ)ಯನ್ನು ನಿರ್ಮಿಸಲಾಗಿದ್ದು. ಈ ಪೈಕಿ ಸಿವಿಲ್ ಕಾಮಗಾರಿಗೆ ₹64 ಲಕ್ಷ ವೆಚ್ಚ ತಗಲಿದ್ದು, ಎಲೆಕ್ಟ್ರಿಕಲ್ ಕಾಮಗಾರಿಗೆ ₹1.33 ಕೋಟಿ ವೆಚ್ಚವಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.</p>.<p>ಈ ಕಾಮಗಾರಿ 2022ರ ಮೇ 20ರಂದು ಆರಂಭಗೊಂಡಿತ್ತು. ಸಿವಿಲ್ ಕಾಮಗಾರಿಗೆ ಬಿಬಿಎಂಪಿ ಅನುದಾನ ಒದಗಿಸಿತ್ತು.</p>.<p>ಮಲ್ಲೇಶ್ವರದ 15ನೇ ಅಡ್ಡರಸ್ತೆ ಬಳಿ ನಿರ್ಮಿಸಿರುವ ನೆಲದಡಿಯಲ್ಲಿ ಪರಿವರ್ತಕದ ಟ್ರಾನ್ಸ್ಫಾರ್ಮರ್ ಉದ್ದ 14 ಮೀಟರ್, ಅಗಲ 5 ಮೀಟರ್ ಹಾಗೂ ಆಳ 4 ಮೀಟರ್ಗಳಷ್ಟಿದೆ.</p>.<p>ಲೋಕಾರ್ಪಣೆ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಮಲ್ಲೇಶ್ವರದ 15ನೇ ಅಡ್ಡ ರಸ್ತೆಯಲ್ಲಿ ಆಯೋಜಿಸಲಾಗಿದ್ದು, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>