ಅನುಷ್ಠಾನಗೊಂಡಿರುವ ಕಾಮಗಾರಿಗಳಿಗಿಂತ, ಬಾಕಿ ಇರುವ ಕಾಮಗಾರಿಗಳ ಸಂಖ್ಯೆಯೇ ಜಾಸ್ತಿ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಾದೇಶ ನೀಡಿದ ಮಾತ್ರಕ್ಕೆ ಕೆಲಸ ಆಗಿದೆ ಎಂದರ್ಥವಲ್ಲ ಎಂದು ತಿಳಿಸಿದರು. ಅನಿರೀಕ್ಷಿತ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುತ್ತೇನೆ. ಲೋಪ ಕಂಡುಬಂದರೆ ಸಂಬಂಧಿಸಿದವರನ್ನು ಸ್ಥಳದಲ್ಲೇ ಅಮಾನತು ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.