‘ಉತ್ತಮ ಆರೋಗ್ಯ ಬೇಕಾದರೆ, ಸಿರಿಧಾನ್ಯ ಮತ್ತು ಸಾಯವಯ ಕೃಷಿಯಲ್ಲಿ ಬೆಳೆದ ಆಹಾರ ಉತ್ಪನ್ನಗಳನ್ನು ಹೆಚ್ಚಾಗಿ ಸೇವಿಸಬೇಕು. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಕಾಳಜಿ ಹೆಚ್ಚಾಗುತ್ತಿದ್ದು, ರಾಸಾಯನಿಕ ಮುಕ್ತ ಆಹಾರಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಸಿರಿಧಾನ್ಯಗಳ ಸೇವನೆ ಹೆಚ್ಚಾಗಿದೆ. ಇದರಿಂದ, ರೈತರು ಹೆಚ್ಚು ಲಾಭಗಳಿಸುತ್ತಿದ್ದು, ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಹಾಯಕವಾಗಿದೆ’ ಎಂದರು.