ಬೆಂಗಳೂರು: ಹೈಕೋರ್ಟ್ನಲ್ಲಿ ಕನ್ನಡತೀರ್ಪುಗಳು ಬರುವಂತಾದರೆ ಶ್ರೀಸಾಮಾನ್ಯನಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿಪ್ರಾಯಪಟ್ಟರು.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಪ್ರಾಧಿಕಾರ ಆಯೋಜಿಸಿದ್ದ ‘ನ್ಯಾಯಾಂಗದಲ್ಲಿ ಕನ್ನಡ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಇದೇ ವೇಳೆ ಕನ್ನಡದಲ್ಲಿ ಆದೇಶ ಬರೆಯಿಸಿದ ನ್ಯಾಯಾಧೀಶರು ಹಾಗೂ ಕನ್ನಡದಲ್ಲಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕರು ಹಾಗೂ ವಕೀಲರಿಗೆ ‘ನ್ಯಾಯಾಂಗ ಕನ್ನಡ ಪ್ರಶಸ್ತಿ’ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರದಾನ ಮಾಡಿದರು.
ಹೈಕೋರ್ಟ್ ಕಲಾಪದಲ್ಲಿ ಕನ್ನಡ ಬಳಕೆ ಹೆಚ್ಚಾಗಬೇಕು ಎಂದು ಆಗ್ರಹಿಸಿ ವಕೀಲರು ಕೆ.ಬಿ.ಕೆ. ಸ್ವಾಮಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಕನ್ನಡದಲ್ಲಿ ಆದೇಶ ಬರೆಯಿಸಿದ ನ್ಯಾಯಾಧೀಶರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನಿಸಿದರು.