ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಮಂಗಳವಾರ ವಿಜಯನಗರ ಮೆಟ್ರೊ ನಿಲ್ದಾಣಕ್ಕೆ ಭೇಟಿ ನೀಡಿ, ಮಹಿಳಾ ಉದ್ಯೋಗಿಗಳಿಗೆ ಬಿಎಂಆರ್ಸಿಎಲ್ ಒದ
ಗಿಸಿರುವ ಸೌಲಭ್ಯಗಳ ಬಗ್ಗೆ ಚರ್ಚಿಸಿದರು.
ಕೃಷ್ಣರಾಜಪುರ ಮೆಟ್ರೊ ನಿಲ್ದಾಣದವರೆಗೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿ, ಮಹಿಳಾ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ಮೆಟ್ರೊ ರೈಲಿನ ಕೋಚ್ಗಳನ್ನು ಹೆಚ್ಚಿಸುವುದರ ಜೊತೆಗೆ ಮಹಿಳಾ ಬೋಗಿಗಳನ್ನು ಹೆಚ್ಚಿಸಬೇಕು’ ಎಂದು ನಾಗಲಕ್ಷ್ಮಿ, ಬಿಎಂಆರ್ಸಿಎಲ್ ಅಧಿಕಾರಿಗಳಿಗೆ ಸಲಹೆ ನೀಡಿದರು. ಬಿಎಂಆರ್ಸಿಎಲ್ನ ಕಾರ್ಯನಿರ್ವಾಹಕ ನಿರ್ದೇಶಕ ಎ.ಎಸ್. ಶಂಕರ್ ಇದ್ದರು