‘11 ವರ್ಷಗಳಿಂದ ನಮ್ಮ ಸಂಸ್ಥೆಯು ಫೌಂಡೇಷನ್ ಜೊತೆಗೆ ಕಾರ್ಯನಿರ್ವಹಿಸುತ್ತಿದೆ. ಎನ್ಎಚ್ಎಫ್ ಹಾಗೂ ಇಂದಿರಾನಗರ ರೋಟರಿ ಟ್ರಸ್ಟ್ ಸಹಕಾರದಲ್ಲಿ ಆಸ್ಪತ್ರೆಯ ಆವರಣದಲ್ಲಿ ‘ಹೃದ್ರೋಗ ಪುನರ್ವಸತಿ ಕೇಂದ್ರ’ವನ್ನು ಸ್ಥಾಪಿಸಲಾಗಿದೆ. ಈ ಕೇಂದ್ರವು ಹೃದ್ರೋಗ ಶಸ್ತ್ರಚಿಕಿತ್ಸೆ ನಂತರದ ವ್ಯಾಯಾಮ, ದೈಹಿಕ ಚಟುವಟಿಕೆಯ ಸಮಾಲೋಚನೆ, ಶಸ್ತ್ರಚಿಕಿತ್ಸಾ ನಂತರದ ತಪಾಸಣೆಯ ಪ್ರಾಮುಖ್ಯ, ಗಾಯದ ಆರೈಕೆ ಮತ್ತು ನೈರ್ಮಲ್ಯ, ಮಧುಮೇಹ, ಅಧಿಕ ರಕ್ತದೊತ್ತಡದ ನಿರ್ವಹಣೆ, ಆಹಾರ ನಿರ್ವಹಣೆ ಮತ್ತು ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತದೆ. ಒಂದೇ ಸೂರಿನಡಿ ಎಲ್ಲಾ ತಪಾಸಣೆಗಳನ್ನು ಮಾಡಲಾಗುತ್ತಿದೆ. ರೋಗಿಗಳ ಸಮಸ್ಯೆಗಳನ್ನು ಪರಿಹರಿಸಲು ನೆರವಾಗಿದೆ’ ಎಂದು ತಿಳಿಸಿದರು.