<p><strong>ಬೆಂಗಳೂರು</strong>: ‘ಕಲಿಕೆಯಲ್ಲಿ ಉತ್ತಮ ಅಂಕಗಳಿಸಿದ ಪ್ರತಿಭಾವಂತರನ್ನು ಸನ್ಮಾನಿಸುವುದರಿಂದ ಮಕ್ಕಳನ್ನು ಶಿಕ್ಷಣಕ್ಕೆ ಉತ್ತೇಜಿಸಿದಂತಾಗುತ್ತದೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಹೇಳಿದರು.</p>.<p>ಬಿಬಿಎಂಪಿ ನೌಕರರ ಸಹಕಾರ ಸಂಘದ 110ನೇ ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಕಗಳಿಸಿದರೆ ಮಾತ್ರ ಬುದ್ದಿವಂತರಲ್ಲ, ಸಮಾಜದಲ್ಲಿ ಹೇಗೆ ಬದುಕುಬೇಕು ಎಂಬ ಕಲೆ ತಿಳಿದಿರಬೇಕು. ಮಕ್ಕಳನ್ನು ಸನ್ಮಾನಿಸುವುದರಿಂದ ಅವರ ಮೇಲೆ ಜವಾಬ್ದಾರಿ ಹೆಚ್ಚುತ್ತದೆ. ಜ್ಞಾನವಂತರಾಗಿ, ಉತ್ತಮ ಪ್ರಜೆಯಾಗಿ ಒಳ್ಳೆಯ ಸಮಾಜ ನಿರ್ಮಾಣ ಮಾಡಿರಿ’ ಎಂದು ಹೇಳಿದರು.</p>.<p>‘ದೇಶದಲ್ಲಿ ಶೇಕಡ 50ರಷ್ಟು ಮಹಿಳೆಯರು ಇದ್ದಾರೆ. ಸಾಮಾಜಿಕ, ಸಾಂಸ್ಕೃತಿಕ, ಸಮಾನತೆ, ರಾಜಕೀಯ ನ್ಯಾಯ ಮಹಿಳೆಯರಿಗೆ ಕೊಡಬೇಕು. ಬಸವೇಶ್ವರರು, ಕುವೆಂಪುರವರು ಮಹಿಳೆಯರ ಸಮಾನತೆ, ಸಾಮಾಜಿಕ ನ್ಯಾಯದ ಪರ ಮಾತನಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರರೂ ಬಡವರು, ಬಡವರಾಗಿಯೇ ಇದ್ದಾರೆ’ ಎಂದರು.</p>.<p>‘ಪೌರ ಕಾರ್ಮಿಕರು ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಅವರ ಮಕ್ಕಳ ಶಿಕ್ಷಣ ಮತ್ತು ಪೌರ ಕಾರ್ಮಿಕರ ಆರೋಗ್ಯ, ವಸತಿ ಸೌಕರ್ಯ ಕುರಿತು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಸಂಗೀತ ನಿರ್ದೇಶಕ ವಿ.ಮನೋಹರ್ ಮಾತನಾಡಿ, ‘ಇಂದಿನ ಪೀಳಿಗೆಯವರು ಕನ್ನಡ ಕಲಿಯಬೇಕು, ಮಾತನಾಡಬೇಕು, ಭಾಷೆಯನ್ನು ಉಳಿಸಬೇಕು’ ಎಂದರು.</p>.<p>ಸಂಘದ ಅಧ್ಯಕ್ಷ ಎ.ಅಮೃತ್ರಾಜ್ ಮಾತನಾಡಿ, ‘ಸಹಕಾರ ಸಂಘದಲ್ಲಿ ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಎಂಬಿಎ ಮತ್ತು ಬಿಇ, ಪದವಿ ಹಾಗೂ ಎಸ್ಎಸ್ಎಲ್ಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು’ ಎಂದರು.</p>.<p>ಸಂಘದ ಉಪಾಧ್ಯಕ್ಷ ಕೆ.ಜಿ.ರವಿ, ಹಿನ್ನಲೆ ಗಾಯಕಿ ಅನುರಾಧಾ ಭಟ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಲಿಕೆಯಲ್ಲಿ ಉತ್ತಮ ಅಂಕಗಳಿಸಿದ ಪ್ರತಿಭಾವಂತರನ್ನು ಸನ್ಮಾನಿಸುವುದರಿಂದ ಮಕ್ಕಳನ್ನು ಶಿಕ್ಷಣಕ್ಕೆ ಉತ್ತೇಜಿಸಿದಂತಾಗುತ್ತದೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಹೇಳಿದರು.</p>.<p>ಬಿಬಿಎಂಪಿ ನೌಕರರ ಸಹಕಾರ ಸಂಘದ 110ನೇ ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಂಕಗಳಿಸಿದರೆ ಮಾತ್ರ ಬುದ್ದಿವಂತರಲ್ಲ, ಸಮಾಜದಲ್ಲಿ ಹೇಗೆ ಬದುಕುಬೇಕು ಎಂಬ ಕಲೆ ತಿಳಿದಿರಬೇಕು. ಮಕ್ಕಳನ್ನು ಸನ್ಮಾನಿಸುವುದರಿಂದ ಅವರ ಮೇಲೆ ಜವಾಬ್ದಾರಿ ಹೆಚ್ಚುತ್ತದೆ. ಜ್ಞಾನವಂತರಾಗಿ, ಉತ್ತಮ ಪ್ರಜೆಯಾಗಿ ಒಳ್ಳೆಯ ಸಮಾಜ ನಿರ್ಮಾಣ ಮಾಡಿರಿ’ ಎಂದು ಹೇಳಿದರು.</p>.<p>‘ದೇಶದಲ್ಲಿ ಶೇಕಡ 50ರಷ್ಟು ಮಹಿಳೆಯರು ಇದ್ದಾರೆ. ಸಾಮಾಜಿಕ, ಸಾಂಸ್ಕೃತಿಕ, ಸಮಾನತೆ, ರಾಜಕೀಯ ನ್ಯಾಯ ಮಹಿಳೆಯರಿಗೆ ಕೊಡಬೇಕು. ಬಸವೇಶ್ವರರು, ಕುವೆಂಪುರವರು ಮಹಿಳೆಯರ ಸಮಾನತೆ, ಸಾಮಾಜಿಕ ನ್ಯಾಯದ ಪರ ಮಾತನಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರರೂ ಬಡವರು, ಬಡವರಾಗಿಯೇ ಇದ್ದಾರೆ’ ಎಂದರು.</p>.<p>‘ಪೌರ ಕಾರ್ಮಿಕರು ಕೋವಿಡ್ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಅವರ ಮಕ್ಕಳ ಶಿಕ್ಷಣ ಮತ್ತು ಪೌರ ಕಾರ್ಮಿಕರ ಆರೋಗ್ಯ, ವಸತಿ ಸೌಕರ್ಯ ಕುರಿತು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಸಂಗೀತ ನಿರ್ದೇಶಕ ವಿ.ಮನೋಹರ್ ಮಾತನಾಡಿ, ‘ಇಂದಿನ ಪೀಳಿಗೆಯವರು ಕನ್ನಡ ಕಲಿಯಬೇಕು, ಮಾತನಾಡಬೇಕು, ಭಾಷೆಯನ್ನು ಉಳಿಸಬೇಕು’ ಎಂದರು.</p>.<p>ಸಂಘದ ಅಧ್ಯಕ್ಷ ಎ.ಅಮೃತ್ರಾಜ್ ಮಾತನಾಡಿ, ‘ಸಹಕಾರ ಸಂಘದಲ್ಲಿ ಸದಸ್ಯರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಎಂಬಿಎ ಮತ್ತು ಬಿಇ, ಪದವಿ ಹಾಗೂ ಎಸ್ಎಸ್ಎಲ್ಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು’ ಎಂದರು.</p>.<p>ಸಂಘದ ಉಪಾಧ್ಯಕ್ಷ ಕೆ.ಜಿ.ರವಿ, ಹಿನ್ನಲೆ ಗಾಯಕಿ ಅನುರಾಧಾ ಭಟ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>