<p><strong>ಬೆಂಗಳೂರು: </strong>ಜಯನಗರ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದ ಆರೋಪದಡಿ ಎಸ್. ಅಜಯ್ಕುಮಾರ್ (42) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಹನುಮಂತನಗರ 2ನೇ ಹಂತದ ಮೌಂಟ್ ಜಾಯ್ ರಸ್ತೆ ನಿವಾಸಿ ಅಜಯ್ಕುಮಾರ್, ಎಂಜಿನಿಯರ್ ಪದವೀಧರ. ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಜ. 10ರಂದು ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಶೌಚಾಲಯಕ್ಕೆ ನುಗ್ಗಿದ್ದ. ಈ ಬಗ್ಗೆ ಕಾಲೇಜು ಪ್ರಾಂಶುಪಾಲರು ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿ, ಹಲವೆಡೆ ಸುತ್ತಾಡುತ್ತಿದ್ದ. ಇತ್ತೀಚೆಗೆ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಈತ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ತಿಳಿಸಿದರು.</p>.<p class="Subhead">ವಿದ್ಯಾರ್ಥಿನಿ ಕೈ ಹಿಡಿದ ಎಳೆದಾಡಿದ್ದ: ‘ಭದ್ರತಾ ಸಿಬ್ಬಂದಿಗಳ ಕಣ್ತಪ್ಪಿಸಿ ಶೌಚಾಲಯದೊಳಗೆ ನುಗ್ಗಿದ್ದ ಆರೋಪಿ, ಅವಿತು ಕುಳಿತುಕೊಂಡಿದ್ದ. ಇದೇ ಸಂದರ್ಭದಲ್ಲೇ ವಿದ್ಯಾರ್ಥಿನಿಯೊಬ್ಬರು ಶೌಚಾಲಯಕ್ಕೆ ಹೋಗಿದ್ದರು. ಅವರ ಕೈ ಹಿಡಿದು ಎಳೆದಾಡಿದ್ದ ಆರೋಪಿ, ಅಸಭ್ಯವಾಗಿ ವರ್ತಿಸಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ವಿದ್ಯಾರ್ಥಿನಿಯ ಬಾಯಿಯನ್ನು ಕೈಯಿಂದ ಮುಚ್ಚಿದ್ದ ಆರೋಪಿ, ಕಿರುಚಾಡದಂತೆ ತಡೆದಿದ್ದ. ತಾನು ಶೌಚಾಲಯಕ್ಕೆ ನುಗ್ಗಿದ್ದ ವಿಷಯವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿ ಸ್ಥಳದಿಂದ ಪರಾರಿಯಾಗಿದ್ದ. ಕೃತ್ಯದ ಸಂಬಂಧ ವಿದ್ಯಾರ್ಥಿನಿ ಹೇಳಿಕೆ ಸಹ ಪಡೆಯಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜಯನಗರ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯಕ್ಕೆ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದ ಆರೋಪದಡಿ ಎಸ್. ಅಜಯ್ಕುಮಾರ್ (42) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಹನುಮಂತನಗರ 2ನೇ ಹಂತದ ಮೌಂಟ್ ಜಾಯ್ ರಸ್ತೆ ನಿವಾಸಿ ಅಜಯ್ಕುಮಾರ್, ಎಂಜಿನಿಯರ್ ಪದವೀಧರ. ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಜ. 10ರಂದು ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಶೌಚಾಲಯಕ್ಕೆ ನುಗ್ಗಿದ್ದ. ಈ ಬಗ್ಗೆ ಕಾಲೇಜು ಪ್ರಾಂಶುಪಾಲರು ದೂರು ನೀಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಕೃತ್ಯ ಎಸಗಿ ಪರಾರಿಯಾಗಿದ್ದ ಆರೋಪಿ, ಹಲವೆಡೆ ಸುತ್ತಾಡುತ್ತಿದ್ದ. ಇತ್ತೀಚೆಗೆ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಈತ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ತಿಳಿಸಿದರು.</p>.<p class="Subhead">ವಿದ್ಯಾರ್ಥಿನಿ ಕೈ ಹಿಡಿದ ಎಳೆದಾಡಿದ್ದ: ‘ಭದ್ರತಾ ಸಿಬ್ಬಂದಿಗಳ ಕಣ್ತಪ್ಪಿಸಿ ಶೌಚಾಲಯದೊಳಗೆ ನುಗ್ಗಿದ್ದ ಆರೋಪಿ, ಅವಿತು ಕುಳಿತುಕೊಂಡಿದ್ದ. ಇದೇ ಸಂದರ್ಭದಲ್ಲೇ ವಿದ್ಯಾರ್ಥಿನಿಯೊಬ್ಬರು ಶೌಚಾಲಯಕ್ಕೆ ಹೋಗಿದ್ದರು. ಅವರ ಕೈ ಹಿಡಿದು ಎಳೆದಾಡಿದ್ದ ಆರೋಪಿ, ಅಸಭ್ಯವಾಗಿ ವರ್ತಿಸಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ವಿದ್ಯಾರ್ಥಿನಿಯ ಬಾಯಿಯನ್ನು ಕೈಯಿಂದ ಮುಚ್ಚಿದ್ದ ಆರೋಪಿ, ಕಿರುಚಾಡದಂತೆ ತಡೆದಿದ್ದ. ತಾನು ಶೌಚಾಲಯಕ್ಕೆ ನುಗ್ಗಿದ್ದ ವಿಷಯವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿ ಸ್ಥಳದಿಂದ ಪರಾರಿಯಾಗಿದ್ದ. ಕೃತ್ಯದ ಸಂಬಂಧ ವಿದ್ಯಾರ್ಥಿನಿ ಹೇಳಿಕೆ ಸಹ ಪಡೆಯಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>