<p><strong>ಬೆಂಗಳೂರು</strong>: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಮುತ್ತಿಟ್ಟು ಪರಾರಿಯಾಗಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿಯ ಬಸವರಾಜ್ ಎಂಬಾತನನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p><p>ಔಷಧ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸದ್ಯ ಚಿಕ್ಕಬಾಣಾವಾರದ ಮಾರುತಿನಗರದಲ್ಲಿ ವಾಸವಾಗಿದ್ದಾನೆ.</p><p>ಹೊರ ರಾಜ್ಯದ ಯುವತಿಯೊಬ್ಬರು ಕಾಲೇಜೊಂದರಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಜುಲೈ 30ರ ರಾತ್ರಿ 9ರ ಸುಮಾರಿಗೆ ವಿದ್ಯಾರ್ಥಿನಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ, ಯುವತಿಯನ್ನು ಬಲವಂತವಾಗಿ ತಬ್ಬಿಕೊಂಡು ಮುತ್ತುಕೊಟ್ಟಿದ್ದ. ಗಾಬರಿಗೊಂಡ ವಿದ್ಯಾರ್ಥಿನಿ ರಕ್ಷಣೆಗಾಗಿ ಕೂಗುತ್ತಿದ್ದಂತೆ, ಆರೋಪಿ ಪರಾರಿಯಾಗಿದ್ದ. ಯುವತಿ ದೂರು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><strong>ಆಟೊ ಚಾಲಕ ಬಂಧನ: </strong>ಕಾರು ಚಾಲಕನ ಮುಖಕ್ಕೆ ಉಗಿದು ಅಸಭ್ಯವಾಗಿ ವರ್ತಿಸಿದ್ದ ಆಟೊ ಚಾಲಕ ಬಾಬಾಸಾಬ್ ಎಂಬಾತನನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಎರಡು ದಿನಗಳ ಹಿಂದೆ ಮಾರತ್ ಹಳ್ಳಿಯ ಯಮಲೂರು ಸಿಗ್ನಲ್ ಬಳಿ ಕಾರು ಹಾಗೂ ಆಟೊ ಚಾಲಕರ ನಡುವೆ ಗಲಾಟೆ ನಡೆದಿತ್ತು. ಆಗ ಬಾಬಾಸಾಬ್, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾರು ಚಾಲಕನ ಮುಖಕ್ಕೆ ಉಗಿದಿದ್ದ. ಅಲ್ಲದೇ ಕಾರಿನ ಗಾಜು ಒಡೆದುಹಾಕಿದ್ದ. ಕಾರು ಚಾಲಕನ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿ, ಆಟೊ ವಶಕ್ಕೆ ಪಡೆದಿದ್ದಾರೆ.</p>.<p><strong>ಮಹಿಳೆಯ ದ್ವಿಚಕ್ರ ವಾಹನ ಕಳವು: </strong>ಹೆಬ್ಬಾಳದ ಚೋಳನಹಳ್ಳಿ ಮಿನಿ ಮಾರ್ಟ್ ಎದುರಿನ ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿದೆ.</p><p>ಮಹಿಳೆಯೊಬ್ಬರು ತರಕಾರಿ ತರಲು ಹೋಗುವ ಆತುರದಲ್ಲಿ ವಾಹನದಲ್ಲಿಯೇ ಕೀ ಬಿಟ್ಟು ಹೋಗಿದ್ದಾರೆ. ಅವರು ವಾಪಸ್ ಬರುವಷ್ಟರಲ್ಲಿ ವಾಹನ ಕಳವಾಗಿತ್ತು. ವ್ಯಕ್ತಿಯೊಬ್ಬ ವಾಹನ ಕಳವು ಮಾಡುತ್ತಿರುವ ದೃಶ್ಯ ಸಮೀಪದಲ್ಲಿದ್ದ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆಯು ದೂರು ದಾಖಲಿಸಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿಕೊಂಡು ಮುತ್ತಿಟ್ಟು ಪರಾರಿಯಾಗಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿಯ ಬಸವರಾಜ್ ಎಂಬಾತನನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p><p>ಔಷಧ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸದ್ಯ ಚಿಕ್ಕಬಾಣಾವಾರದ ಮಾರುತಿನಗರದಲ್ಲಿ ವಾಸವಾಗಿದ್ದಾನೆ.</p><p>ಹೊರ ರಾಜ್ಯದ ಯುವತಿಯೊಬ್ಬರು ಕಾಲೇಜೊಂದರಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಜುಲೈ 30ರ ರಾತ್ರಿ 9ರ ಸುಮಾರಿಗೆ ವಿದ್ಯಾರ್ಥಿನಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ, ಯುವತಿಯನ್ನು ಬಲವಂತವಾಗಿ ತಬ್ಬಿಕೊಂಡು ಮುತ್ತುಕೊಟ್ಟಿದ್ದ. ಗಾಬರಿಗೊಂಡ ವಿದ್ಯಾರ್ಥಿನಿ ರಕ್ಷಣೆಗಾಗಿ ಕೂಗುತ್ತಿದ್ದಂತೆ, ಆರೋಪಿ ಪರಾರಿಯಾಗಿದ್ದ. ಯುವತಿ ದೂರು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><strong>ಆಟೊ ಚಾಲಕ ಬಂಧನ: </strong>ಕಾರು ಚಾಲಕನ ಮುಖಕ್ಕೆ ಉಗಿದು ಅಸಭ್ಯವಾಗಿ ವರ್ತಿಸಿದ್ದ ಆಟೊ ಚಾಲಕ ಬಾಬಾಸಾಬ್ ಎಂಬಾತನನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಎರಡು ದಿನಗಳ ಹಿಂದೆ ಮಾರತ್ ಹಳ್ಳಿಯ ಯಮಲೂರು ಸಿಗ್ನಲ್ ಬಳಿ ಕಾರು ಹಾಗೂ ಆಟೊ ಚಾಲಕರ ನಡುವೆ ಗಲಾಟೆ ನಡೆದಿತ್ತು. ಆಗ ಬಾಬಾಸಾಬ್, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾರು ಚಾಲಕನ ಮುಖಕ್ಕೆ ಉಗಿದಿದ್ದ. ಅಲ್ಲದೇ ಕಾರಿನ ಗಾಜು ಒಡೆದುಹಾಕಿದ್ದ. ಕಾರು ಚಾಲಕನ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿ, ಆಟೊ ವಶಕ್ಕೆ ಪಡೆದಿದ್ದಾರೆ.</p>.<p><strong>ಮಹಿಳೆಯ ದ್ವಿಚಕ್ರ ವಾಹನ ಕಳವು: </strong>ಹೆಬ್ಬಾಳದ ಚೋಳನಹಳ್ಳಿ ಮಿನಿ ಮಾರ್ಟ್ ಎದುರಿನ ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿದೆ.</p><p>ಮಹಿಳೆಯೊಬ್ಬರು ತರಕಾರಿ ತರಲು ಹೋಗುವ ಆತುರದಲ್ಲಿ ವಾಹನದಲ್ಲಿಯೇ ಕೀ ಬಿಟ್ಟು ಹೋಗಿದ್ದಾರೆ. ಅವರು ವಾಪಸ್ ಬರುವಷ್ಟರಲ್ಲಿ ವಾಹನ ಕಳವಾಗಿತ್ತು. ವ್ಯಕ್ತಿಯೊಬ್ಬ ವಾಹನ ಕಳವು ಮಾಡುತ್ತಿರುವ ದೃಶ್ಯ ಸಮೀಪದಲ್ಲಿದ್ದ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆಯು ದೂರು ದಾಖಲಿಸಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>