‘ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ’: ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಧ್ವಜಾರೋಹಣ ಮಾಡಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ನಮ್ಮೆಲ್ಲರ ಹಿರಿಯರು ಮತ್ತು ಅಸಂಖ್ಯಾತ ಜನರ ತ್ಯಾಗ– ಬಲಿದಾನಗಳಿಂದ ದೇಶ ಸ್ವಾತಂತ್ರ್ಯ ಪಡೆಯಿತು. 75 ವರ್ಷಗಳ ಕಾಲ ಸೈನಿಕರು ಗಡಿಯನ್ನು ಕಾದಿರುವ ಪರಿಣಾಮ ಸ್ವಾತಂತ್ರ್ಯ ಉಳಿದಿದೆ’ ಎಂದರು. ‘ಭಾರತವು ಇಂದು ಜಗತ್ತಿನಲ್ಲಿ ತಲೆ ಎತ್ತಿ ನಿಲ್ಲುತ್ತಿದೆ. ಜಗತ್ತು ಭಾರತದತ್ತ ಗೌರವದಿಂದ ನೋಡುತ್ತಿದೆ. ತಿರಂಗಾಕ್ಕೆ ವಿಶ್ವದಲ್ಲೇ ಮಾನ್ಯತೆ ಬಂದಿದೆ. ರಷ್ಯ–ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ತೆರವುಗೊಳಿಸುವಾಗ ತ್ರಿವರ್ಣಧ್ವಜಕ್ಕೆ ಇವೆರಡೂ ದೇಶಗಳ ಸೈನಿಕರು ಗೌರವ ಕೊಟ್ಟಿದ್ದರು’ ಎಂದು ಹೇಳಿದರು.