ಬೆಂಗಳೂರು: ವೇದಿಕೆ ಮೇಲೆಲ್ಲ ತಿರಂಗದ ಝಗಮಗ ಬಣ್ಣಗಳ ಬಳುಕು, ಸಭಾಂಗಣದಲ್ಲಿ ಸೇರಿದ್ದವರ ಕೈಯಲ್ಲಿ ಅರಳಿದ್ದ ರಾಷ್ಟ್ರಧ್ವಜಗಳು, ಶಾಸ್ತ್ರೀಯ ನೃತ್ಯ ಮತ್ತು ಸಂಗೀತಗಳ ಹದವಾದ ಸಮ್ಮಿಲನದಲ್ಲಿ ತಾಯಿ ಭಾರತಿಯ ಸ್ತುತಿ, ಬಳಿಕ ಸಮಕಾಲೀನ ಚಿತ್ರಗೀತೆಗಳ ಮೂಲಕ ಜನರಲ್ಲಿ ಸಂಭ್ರಮ ಹೆಚ್ಚಿಸಿದ ಗಾಯಕಿ ಮಂಗ್ಲಿ (ಸತ್ಯವತಿ)ಮತ್ತು ಅವರ ತಂಗಿ ಇಂದಿರಾವತಿ, ಇದಕ್ಕೆ ಕಳಶವಿಟ್ಟಂತೆ ನಡುರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಂದ ಧ್ವಜಾರೋಹಣ.