‘ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿ ಮತ್ತು ಅಲ್ಲಿನ ಮಕ್ಕಳು ಪದವಿ ಪಡೆದು ಸ್ವಯಂ ಉದ್ಯೋಗ, ಸರ್ಕಾರಿ ಸೇವೆಗೆ ಸೇರಿ ಸಮಾಜಮುಖಿ ಸೇವೆ ಮಾಡುವಂತಹ ವಾತಾವರಣ ನಿರ್ಮಾಣ ಮಾಡಬೇಕು. ಜೊತೆಗೆ ಗ್ರಾಮೀಣ ಭಾಗದ ಜಲ್ವಂತ ಸಮಸ್ಯೆಗಳಿಗೂ ಗಮನ ನೀಡಿ ಆದ್ಯತೆ ಮೇರೆಗೆ ಸರ್ಕಾರಿ ಶಾಲೆಗಳ ಅಭಿವೃದ್ದಿ, ಕುಡಿಯುವ ನೀರು, ಆರೋಗ್ಯ ಸೇವೆಗೆ ಗಮನ ನೀಡಲಾಗುತ್ತಿದೆ’ ಎಂದು ಬೆಂಗಳೂರು ರೋಟರಿ 3191 ಅಧ್ಯಕ್ಷ ಕೆ.ಎಂ.ಶೈಲೇಂದ್ರ ಹೇಳಿದರು.