<p><strong>ಯಲಹಂಕ: </strong>ಅನ್ವೇಷಣಾ ಕಾಯ್ದೆಯಡಿ ರಾಜ್ಯದಲ್ಲಿ ಹೊಸ ತಂತ್ರಜ್ಞಾನಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ ಪೂರಕವಾಗುವಂತೆ ನಿಯಂತ್ರಣಾತ್ಮಕ ಪ್ರಯೋಗಾತ್ಮಕ ವೇದಿಕೆಯನ್ನು (ರೆಗ್ಯುಲೇಟರಿ ಸ್ಯಾಂಡ್ಬಾಕ್ಸ್) ರೂಪಿಸುವ ಗುರಿ ಹೊಂದಲಾಗಿದೆ ಎಂದು ಐಟಿ–ಬಿಟಿ ಇಲಾಖೆಯ ಕಾರ್ಯದರ್ಶಿ ಎನ್. ಮಂಜುಳಾ ತಿಳಿಸಿದರು.</p>.<p>ಥಣಿಸಂದ್ರ ಮುಖ್ಯರಸ್ತೆಯ ಭಾರತೀಯ ಸಿಟಿಯಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ(ಐಎಎಂಎಐ) ಆಯೋಜಿಸಿರುವ 20ನೇ ಆವೃತ್ತಿಯ ‘ಇಂಡಿಯಾ ಡಿಜಿಟಲ್ ಶೃಂಗಸಭೆ’ಯನ್ನು (ಐಡಿಎಸ್-2026) ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಡಿಮೆ ನಿಯಂತ್ರಣಗಳಿರುವ ಮುಕ್ತ ವಾತಾವರಣದಲ್ಲಿ ವಿವಿಧ ತಂತ್ರಜ್ಞಾನಗಳನ್ನು ಪರೀಕ್ಷಿಸಲು ಹಾಗೂ ಅಭಿವೃದ್ಧಿಪಡಿಸಲು ‘ರೆಗ್ಯುಲೇಟರಿ ಸ್ಯಾಂಡ್ಬಾಕ್ಸ್’ ನೆರವಾಗಲಿದೆ’ ಎಂದರು.</p>.<p>‘ದೇಶದಲ್ಲಿ ಎಐ ಸಾಮರ್ಥ್ಯದ ಪ್ರಮುಖ ಕೇಂದ್ರವಾಗಿ ರಾಜ್ಯ ಹೊರಹೊಮ್ಮಿದೆ. ಸರ್ಕಾರ ಪ್ರಾಯೋಜಿತ ಉತ್ಕೃಷ್ಟತಾ ಕೇಂದ್ರಗಳು ಹಾಗೂ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳು, ಎಐ ಪ್ರತಿಭೆಗಳ ಸಾಂದ್ರತೆ ಮತ್ತು ಬಲಿಷ್ಠ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಗಳಿಂದಾಗಿ ಕರ್ನಾಟಕವು ಈ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ’ ಎಂದು ಹೇಳಿದರು.</p>.<p>ಐಎಎಂಎಐ ಅಧ್ಯಕ್ಷ ಹಾಗೂ ಬಿಲ್ಡೆಸ್ಕ್ ಸಹ-ಸಂಸ್ಥಾಪಕ ಶ್ರೀನಿವಾಸು ಮಾತನಾಡಿ, ‘ಡಿಜಿಟಲ್ ತಂತ್ರಜ್ಞಾನವು ಬ್ಯಾಂಕಿಂಗ್, ಪಾವತಿ, ವಾಣಿಜ್ಯ, ಸಾರಿಗೆ, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ದೇಶದ ಆರ್ಥಿಕ ಬೆಳವಣಿಗೆಯ ಬುನಾದಿಯಾಗಿದೆ. ಎಐ ಅನ್ನು ಜವಾಬ್ದಾರಿಯುತವಾಗಿ ಹಾಗೂ ಪಾರದರ್ಶಕವಾಗಿ ಅಳವಡಿಸುವುದೇ ಇಂದಿನ ಪ್ರಮುಖ ಸವಾಲು’ ಎಂದು ಅಭಿಪ್ರಾಯಪಟ್ಟರು.</p>.<p>ಐಎಎಂಎಐ ಅಧ್ಯಕ್ಷ ಡಾ.ಸುಭೋ ರೇ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಐಡಿಎಸ್-2026ನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ‘ಮೇಕ್ ಇನ್ ಇಂಡಿಯಾ’ ಸಹಯೋಗದೊಂದಿಗೆ ಆಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಅನ್ವೇಷಣಾ ಕಾಯ್ದೆಯಡಿ ರಾಜ್ಯದಲ್ಲಿ ಹೊಸ ತಂತ್ರಜ್ಞಾನಗಳ ಸಂಶೋಧನೆ ಮತ್ತು ಅಭಿವೃದ್ಧಿಗೆ ಪೂರಕವಾಗುವಂತೆ ನಿಯಂತ್ರಣಾತ್ಮಕ ಪ್ರಯೋಗಾತ್ಮಕ ವೇದಿಕೆಯನ್ನು (ರೆಗ್ಯುಲೇಟರಿ ಸ್ಯಾಂಡ್ಬಾಕ್ಸ್) ರೂಪಿಸುವ ಗುರಿ ಹೊಂದಲಾಗಿದೆ ಎಂದು ಐಟಿ–ಬಿಟಿ ಇಲಾಖೆಯ ಕಾರ್ಯದರ್ಶಿ ಎನ್. ಮಂಜುಳಾ ತಿಳಿಸಿದರು.</p>.<p>ಥಣಿಸಂದ್ರ ಮುಖ್ಯರಸ್ತೆಯ ಭಾರತೀಯ ಸಿಟಿಯಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ(ಐಎಎಂಎಐ) ಆಯೋಜಿಸಿರುವ 20ನೇ ಆವೃತ್ತಿಯ ‘ಇಂಡಿಯಾ ಡಿಜಿಟಲ್ ಶೃಂಗಸಭೆ’ಯನ್ನು (ಐಡಿಎಸ್-2026) ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಡಿಮೆ ನಿಯಂತ್ರಣಗಳಿರುವ ಮುಕ್ತ ವಾತಾವರಣದಲ್ಲಿ ವಿವಿಧ ತಂತ್ರಜ್ಞಾನಗಳನ್ನು ಪರೀಕ್ಷಿಸಲು ಹಾಗೂ ಅಭಿವೃದ್ಧಿಪಡಿಸಲು ‘ರೆಗ್ಯುಲೇಟರಿ ಸ್ಯಾಂಡ್ಬಾಕ್ಸ್’ ನೆರವಾಗಲಿದೆ’ ಎಂದರು.</p>.<p>‘ದೇಶದಲ್ಲಿ ಎಐ ಸಾಮರ್ಥ್ಯದ ಪ್ರಮುಖ ಕೇಂದ್ರವಾಗಿ ರಾಜ್ಯ ಹೊರಹೊಮ್ಮಿದೆ. ಸರ್ಕಾರ ಪ್ರಾಯೋಜಿತ ಉತ್ಕೃಷ್ಟತಾ ಕೇಂದ್ರಗಳು ಹಾಗೂ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳು, ಎಐ ಪ್ರತಿಭೆಗಳ ಸಾಂದ್ರತೆ ಮತ್ತು ಬಲಿಷ್ಠ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಗಳಿಂದಾಗಿ ಕರ್ನಾಟಕವು ಈ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ’ ಎಂದು ಹೇಳಿದರು.</p>.<p>ಐಎಎಂಎಐ ಅಧ್ಯಕ್ಷ ಹಾಗೂ ಬಿಲ್ಡೆಸ್ಕ್ ಸಹ-ಸಂಸ್ಥಾಪಕ ಶ್ರೀನಿವಾಸು ಮಾತನಾಡಿ, ‘ಡಿಜಿಟಲ್ ತಂತ್ರಜ್ಞಾನವು ಬ್ಯಾಂಕಿಂಗ್, ಪಾವತಿ, ವಾಣಿಜ್ಯ, ಸಾರಿಗೆ, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ದೇಶದ ಆರ್ಥಿಕ ಬೆಳವಣಿಗೆಯ ಬುನಾದಿಯಾಗಿದೆ. ಎಐ ಅನ್ನು ಜವಾಬ್ದಾರಿಯುತವಾಗಿ ಹಾಗೂ ಪಾರದರ್ಶಕವಾಗಿ ಅಳವಡಿಸುವುದೇ ಇಂದಿನ ಪ್ರಮುಖ ಸವಾಲು’ ಎಂದು ಅಭಿಪ್ರಾಯಪಟ್ಟರು.</p>.<p>ಐಎಎಂಎಐ ಅಧ್ಯಕ್ಷ ಡಾ.ಸುಭೋ ರೇ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಐಡಿಎಸ್-2026ನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಹಾಗೂ ‘ಮೇಕ್ ಇನ್ ಇಂಡಿಯಾ’ ಸಹಯೋಗದೊಂದಿಗೆ ಆಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>