<p><strong>ಬೆಂಗಳೂರು</strong>: ‘ಪ್ರಸ್ತುತ ಹಾಗೂ ಭವಿಷ್ಯದಲ್ಲಿ ಬಾಹ್ಯಾಕಾಶ ಹವಾಮಾನ ಮುನ್ಸೂಚನೆ ಕೂಡ ಒಂದು ಸೇವೆಯಾಗಲಿದೆ’ ಎಂದು ಇಸ್ರೊ ನಿವೃತ್ತ ವಿಜ್ಞಾನಿ ವೆಂಕಟರಾವ್ ತಿಳಿಸಿದರು.</p>.<p>ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು ವಿಜ್ಞಾನ ವೇದಿಕೆ ಮತ್ತು ಕರ್ನಾಟಕ ಜ್ಞಾನವಿಜ್ಞಾನ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭಾರತ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಸ್ವಾವಲಂಬಿಯಾಗಿದೆ. 34 ರಾಷ್ಟ್ರಗಳ 342 ಉಪಗ್ರಹಗಳನ್ನು ಉಡಾಯಿಸುವ ಮೂಲಕ ಇಸ್ರೊ ದೇಶಕ್ಕೆ ಆರ್ಥಿಕ ನೆರವನ್ನೂ ತಂದುಕೊಟ್ಟಿದೆ’ ಎಂದರು.</p>.<p>ಇದೇ ವೇಳೆ ವಿವಿಧ ರೀತಿಯ ಕೃತಕ ಉಪಗ್ರಹಗಳು, ಅವುಗಳ ಉಪಯೋಗ, ಉಡ್ಡಯನ ವಾಹನಗಳು, ರಾಕೆಟ್ಗಳ ಕುರಿತು ವಿವರಿಸಿ, ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸಿದರು.</p>.<p>ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ(ಕೆಜೆವಿಎಸ್) ಕಾರ್ಯದರ್ಶಿ ಈ. ಬಸವರಾಜು, ‘ಚಂದ್ರಯಾನ-3ರ ಇಸ್ರೊ ಸಾಧನೆಯ ಗುರುತಿಗಾಗಿ ದೇಶದಾದ್ಯಂತ ಈ ವರ್ಷದಿಂದ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ನಾ. ಶ್ರೀಧರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪ್ರಸ್ತುತ ಹಾಗೂ ಭವಿಷ್ಯದಲ್ಲಿ ಬಾಹ್ಯಾಕಾಶ ಹವಾಮಾನ ಮುನ್ಸೂಚನೆ ಕೂಡ ಒಂದು ಸೇವೆಯಾಗಲಿದೆ’ ಎಂದು ಇಸ್ರೊ ನಿವೃತ್ತ ವಿಜ್ಞಾನಿ ವೆಂಕಟರಾವ್ ತಿಳಿಸಿದರು.</p>.<p>ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು ವಿಜ್ಞಾನ ವೇದಿಕೆ ಮತ್ತು ಕರ್ನಾಟಕ ಜ್ಞಾನವಿಜ್ಞಾನ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಭಾರತ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಸ್ವಾವಲಂಬಿಯಾಗಿದೆ. 34 ರಾಷ್ಟ್ರಗಳ 342 ಉಪಗ್ರಹಗಳನ್ನು ಉಡಾಯಿಸುವ ಮೂಲಕ ಇಸ್ರೊ ದೇಶಕ್ಕೆ ಆರ್ಥಿಕ ನೆರವನ್ನೂ ತಂದುಕೊಟ್ಟಿದೆ’ ಎಂದರು.</p>.<p>ಇದೇ ವೇಳೆ ವಿವಿಧ ರೀತಿಯ ಕೃತಕ ಉಪಗ್ರಹಗಳು, ಅವುಗಳ ಉಪಯೋಗ, ಉಡ್ಡಯನ ವಾಹನಗಳು, ರಾಕೆಟ್ಗಳ ಕುರಿತು ವಿವರಿಸಿ, ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸಿದರು.</p>.<p>ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ(ಕೆಜೆವಿಎಸ್) ಕಾರ್ಯದರ್ಶಿ ಈ. ಬಸವರಾಜು, ‘ಚಂದ್ರಯಾನ-3ರ ಇಸ್ರೊ ಸಾಧನೆಯ ಗುರುತಿಗಾಗಿ ದೇಶದಾದ್ಯಂತ ಈ ವರ್ಷದಿಂದ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ನಾ. ಶ್ರೀಧರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>