<p><strong>ಬೆಂಗಳೂರು</strong>: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಭದ್ರತೆ ಹಿನ್ನೆಲೆ ಪ್ರಯಾಣಿಕರು ವಿಮಾನ ಹೊರಡುವ ಸಮಯಕ್ಕಿಂತ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ತಲುಪುವಂತೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮನವಿ ಮಾಡಿದೆ.</p><p>ಪ್ರಯಾಣಿಕರ ಸಲಹೆ ಮಾರ್ಗಸೂಚಿಯಲ್ಲಿ ಹೊಸ ಅಂಶ ಸೇರ್ಪಡೆ ಮಾಡಿದ್ದು, ಹೆಚ್ಚಿನ ಭದ್ರತಾ ದೃಷಿಯಿಂದ ಪ್ರಯಾಣಿಕರ ಸುರಕ್ಷತೆಗಾಗಿ ಅಗತ್ಯ ತಪಾಸಣೆ ನಡೆಸುವ ನಿಟ್ಟಿನಲ್ಲಿ ವಿಮಾನ ಹೊರಡುವ ಸಮಯಕ್ಕಿಂತ 3 ಗಂಟೆ ಮುಂಚೆಯೇ ನಿಲ್ದಾಣವನ್ನು ತಲುಪಬೇಕೆಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.</p>.India-Pak Tensions | ಕಾಶ್ಮೀರದಲ್ಲಿ 7 ಉಗ್ರರನ್ನು ಹೊಡೆದುರುಳಿಸಿದ ಬಿಎಸ್ಎಫ್.ಭಾರತ–ಪಾಕ್ ಉದ್ವಿಗ್ನತೆ:ನಮ್ಮ ಆಟಗಾರರ ಜೊತೆ ಸಂಪರ್ಕವಿದೆ; ಕ್ರಿಕೆಟ್ ಆಸ್ಟ್ರೇಲಿಯಾ. <p>ದೇಶದಾದ್ಯಂತ ಭದ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವರ್ಧಿತ ಸ್ಕ್ರೀನಿಂಗ್ ಕ್ರಮಗಳು ಜಾರಿಯಲ್ಲಿವೆ. ಸುಗಮ ಚೆಕ್-ಇನ್, ತಪಸಾಣೆ ಹಾಗೂ ಬೋರ್ಡಿಂಗ್ ಅನುಭವ ಪಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೆಐಎ ಮಾಹಿತಿ ನೀಡಿದೆ.</p><p>ಹೊಸ ಮಾರ್ಗಸೂಚಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೆಐಎ ತಿಳಿಸಿದೆ.</p><p>'ಎಲ್ಲಾ ವಿಮಾನಗಳಿಗೆ ದ್ವಿತೀಯ ಹಂತದ ಭದ್ರತಾ (ಸೆಕೆಂಡರಿ ಲ್ಯಾಡರ್ ಪಾಯಿಂಟ್) ತಪಾಸಣೆಯನ್ನು ಕಡ್ಡಾಯಗೊಳಿಸಿದೆ, ವಿಮಾನ ನಿಲ್ದಾಣಗಳ ಟರ್ಮಿನಲ್ ಕಟ್ಟಡಗಳಲ್ಲಿ ಪ್ರಯಾಣಿಕರನ್ನು ಭೇಟಿ ಮಾಡುವವರಿಗೆ ನಿರ್ಬಂಧ ವಿಧಿಸಲಾಗಿದೆ' ಎಂದು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (ಬಿಸಿಎಎಸ್) ತಿಳಿಸಿದೆ. </p>.ಪಾಕ್ ಶೆಲ್ ದಾಳಿ: ಗಡಿ ನಿಯಂತ್ರಣ ರೇಖೆಯ ಬಳಿಯಿರುವ 20 ಮನೆಗಳಿಗೆ ಹಾನಿ.Ind–Pak Tensions: ಗಡಿ ನಿಯಂತ್ರಣಾ ರೇಖೆ ಬಳಿ ಪಾಕ್ ಶೆಲ್ ದಾಳಿ; ಮಹಿಳೆ ಸಾವು.India-Pakistan Tensions: ಹಡಗು, ಬಂದರುಗಳಲ್ಲಿ ಭದ್ರತೆ ಹೆಚ್ಚಳ.ಭಾರತ–ಪಾಕ್ ನಡುವೆ ಉದ್ವಿಗ್ನತೆ: ಸೆನ್ಸೆಕ್ಸ್, ನಿಫ್ಟಿ ಕುಸಿತದೊಂದಿಗೆ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಭದ್ರತೆ ಹಿನ್ನೆಲೆ ಪ್ರಯಾಣಿಕರು ವಿಮಾನ ಹೊರಡುವ ಸಮಯಕ್ಕಿಂತ ಮೂರು ಗಂಟೆಗಳ ಮುನ್ನ ವಿಮಾನ ನಿಲ್ದಾಣಕ್ಕೆ ತಲುಪುವಂತೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮನವಿ ಮಾಡಿದೆ.</p><p>ಪ್ರಯಾಣಿಕರ ಸಲಹೆ ಮಾರ್ಗಸೂಚಿಯಲ್ಲಿ ಹೊಸ ಅಂಶ ಸೇರ್ಪಡೆ ಮಾಡಿದ್ದು, ಹೆಚ್ಚಿನ ಭದ್ರತಾ ದೃಷಿಯಿಂದ ಪ್ರಯಾಣಿಕರ ಸುರಕ್ಷತೆಗಾಗಿ ಅಗತ್ಯ ತಪಾಸಣೆ ನಡೆಸುವ ನಿಟ್ಟಿನಲ್ಲಿ ವಿಮಾನ ಹೊರಡುವ ಸಮಯಕ್ಕಿಂತ 3 ಗಂಟೆ ಮುಂಚೆಯೇ ನಿಲ್ದಾಣವನ್ನು ತಲುಪಬೇಕೆಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ.</p>.India-Pak Tensions | ಕಾಶ್ಮೀರದಲ್ಲಿ 7 ಉಗ್ರರನ್ನು ಹೊಡೆದುರುಳಿಸಿದ ಬಿಎಸ್ಎಫ್.ಭಾರತ–ಪಾಕ್ ಉದ್ವಿಗ್ನತೆ:ನಮ್ಮ ಆಟಗಾರರ ಜೊತೆ ಸಂಪರ್ಕವಿದೆ; ಕ್ರಿಕೆಟ್ ಆಸ್ಟ್ರೇಲಿಯಾ. <p>ದೇಶದಾದ್ಯಂತ ಭದ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ವರ್ಧಿತ ಸ್ಕ್ರೀನಿಂಗ್ ಕ್ರಮಗಳು ಜಾರಿಯಲ್ಲಿವೆ. ಸುಗಮ ಚೆಕ್-ಇನ್, ತಪಸಾಣೆ ಹಾಗೂ ಬೋರ್ಡಿಂಗ್ ಅನುಭವ ಪಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೆಐಎ ಮಾಹಿತಿ ನೀಡಿದೆ.</p><p>ಹೊಸ ಮಾರ್ಗಸೂಚಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೆಐಎ ತಿಳಿಸಿದೆ.</p><p>'ಎಲ್ಲಾ ವಿಮಾನಗಳಿಗೆ ದ್ವಿತೀಯ ಹಂತದ ಭದ್ರತಾ (ಸೆಕೆಂಡರಿ ಲ್ಯಾಡರ್ ಪಾಯಿಂಟ್) ತಪಾಸಣೆಯನ್ನು ಕಡ್ಡಾಯಗೊಳಿಸಿದೆ, ವಿಮಾನ ನಿಲ್ದಾಣಗಳ ಟರ್ಮಿನಲ್ ಕಟ್ಟಡಗಳಲ್ಲಿ ಪ್ರಯಾಣಿಕರನ್ನು ಭೇಟಿ ಮಾಡುವವರಿಗೆ ನಿರ್ಬಂಧ ವಿಧಿಸಲಾಗಿದೆ' ಎಂದು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (ಬಿಸಿಎಎಸ್) ತಿಳಿಸಿದೆ. </p>.ಪಾಕ್ ಶೆಲ್ ದಾಳಿ: ಗಡಿ ನಿಯಂತ್ರಣ ರೇಖೆಯ ಬಳಿಯಿರುವ 20 ಮನೆಗಳಿಗೆ ಹಾನಿ.Ind–Pak Tensions: ಗಡಿ ನಿಯಂತ್ರಣಾ ರೇಖೆ ಬಳಿ ಪಾಕ್ ಶೆಲ್ ದಾಳಿ; ಮಹಿಳೆ ಸಾವು.India-Pakistan Tensions: ಹಡಗು, ಬಂದರುಗಳಲ್ಲಿ ಭದ್ರತೆ ಹೆಚ್ಚಳ.ಭಾರತ–ಪಾಕ್ ನಡುವೆ ಉದ್ವಿಗ್ನತೆ: ಸೆನ್ಸೆಕ್ಸ್, ನಿಫ್ಟಿ ಕುಸಿತದೊಂದಿಗೆ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>