<p><strong>ಬೆಂಗಳೂರು</strong>: ಬಿಬಿಎಂಪಿಯ ಎಲ್ಲ ವಲಯಗಳಲ್ಲಿ ಜಾಗೃತಿ ಅಭಿಯಾನ ಹಾಗೂ ವಿಭಜನೆ ದುರಂತದ ಸ್ಮರಣೆಯ ಛಾಯಾಚಿತ್ರ ಪ್ರದರ್ಶನವನ್ನು ಭಾನುವಾರ ಆಯೋಜಿಸಲಾಗಿತ್ತು.</p>.<p>1947ರಲ್ಲಿ ಭಾರತ ಮತ್ತು ಪಾಕಿಸ್ತಾನ ವಿಭಜನೆಯಿಂದ ನೊಂದ ಲಕ್ಷಾಂತರ ಜನರ ಸಂಕಟ, ನೋವು ಮತ್ತು ನೋವನ್ನು ಬೆಳಕಿಗೆ ತರುವ ಸಲುವಾಗಿ ‘ವಿಭಜನೆಯ ದುರಂತದ ಸ್ಮರಣೆಯ ದಿನ’ ಆಯೋಜಿಸಲಾಗುತ್ತದೆ.</p>.<p>ಯಲಹಂಕ ವಲಯದ ಆರ್.ಎಂ.ಝಡ್ ಗ್ಯಾಲೆರಿಯಾ, ದಾಸರಹಳ್ಳಿ ವಲಯ ಶೆಟ್ಟಿಹಳ್ಳಿಯ ಶಿವಕುಮಾರ ಸ್ವಾಮೀಜಿ ಯೋಗಮಂದಿರ, ಬೊಮ್ಮನಹಳ್ಳಿ ವಲಯದ ಎಚ್.ಎಸ್.ಆರ್ ಬಿಡಿಎ ಕಾಂಪ್ಲೆಕ್ಸ್, ಮಹದೇವಪುರ ವಲಯದ ಫಿನಿಕ್ಸ್ ಮಾಲ್, ಆರ್.ಆರ್.ನಗರ ವಲಯ ಯಶವಂತಪುರದಲ್ಲಿನ ರಾಯಲ್ ಮಾರ್ಟ್ ಬಳಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.</p>.<p>ಎಚ್.ಎಸ್.ಆರ್ ಬಿಡಿಎ ಕಾಂಪ್ಲೆಕ್ಸ್ ಬಳಿ ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನಕ್ಕೆ ಸುರಾನಾ ವಿದ್ಯಾಲಯದ ವಿದ್ಯಾರ್ಥಿಗಳು ಭೇಟಿ ನೀಡಿ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು.</p>.<p><strong>ಜಾಗೃತಿ ಜಾಥಾ:</strong> ಬಿಬಿಎಂಪಿಯ ಎಲ್ಲಾ ವಾಡ್೯ಗಳಲ್ಲಿ ಜಾಗೃತಿ ಜಾಥಾ ನಡೆಯಿತು. ಪೂರ್ವ ವಲಯದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ 3 ಸಾವಿರ ವಿದ್ಯಾರ್ಥಿಗಳು ಮತ್ತು ಎಸ್.ಪಿ.ಸಿ, ಎನ್.ಎಸ್.ಎಸ್ ಮತ್ತು ಶಾಲಾ ಕಾಲೇಜು ಸಮವಸ್ತ್ರ 2 ಸಾವಿರ ಸೇರಿ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳುಜಾಥಾದಲ್ಲಿ ಭಾಗವಹಿಸಿದ್ದರು.</p>.<p>ಕ್ಲೀವ್ ಲ್ಯಾಂಡ್ ಟೌನ್ ಬಿಬಿಎಂಪಿ ಶಿಕ್ಷಣ ಸಂಸ್ಥೆಗಳ ಆವರಣದಿಂದ ಪ್ರಾರಂಭವಾದ ಜಾಥಾ ಫ್ರೇಜರ್ ಟೌನ್ನ ಪ್ರಮುಖ ರಸ್ತೆಗಳಲ್ಲಿ ಸಾಗಿದ್ದು, ಬ್ಯಾಂಡ್ ಸೆಟ್, ತಮಟೆ ವಾದನ ಗಮನಸೆಳೆದವು.ರಾಜಾಜಿನಗರ, ಪದ್ಮನಾಭನಗರ ಸೇರಿದಂತೆ ಇನ್ನಿತರೆ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿಯ ಎಲ್ಲ ವಲಯಗಳಲ್ಲಿ ಜಾಗೃತಿ ಅಭಿಯಾನ ಹಾಗೂ ವಿಭಜನೆ ದುರಂತದ ಸ್ಮರಣೆಯ ಛಾಯಾಚಿತ್ರ ಪ್ರದರ್ಶನವನ್ನು ಭಾನುವಾರ ಆಯೋಜಿಸಲಾಗಿತ್ತು.</p>.<p>1947ರಲ್ಲಿ ಭಾರತ ಮತ್ತು ಪಾಕಿಸ್ತಾನ ವಿಭಜನೆಯಿಂದ ನೊಂದ ಲಕ್ಷಾಂತರ ಜನರ ಸಂಕಟ, ನೋವು ಮತ್ತು ನೋವನ್ನು ಬೆಳಕಿಗೆ ತರುವ ಸಲುವಾಗಿ ‘ವಿಭಜನೆಯ ದುರಂತದ ಸ್ಮರಣೆಯ ದಿನ’ ಆಯೋಜಿಸಲಾಗುತ್ತದೆ.</p>.<p>ಯಲಹಂಕ ವಲಯದ ಆರ್.ಎಂ.ಝಡ್ ಗ್ಯಾಲೆರಿಯಾ, ದಾಸರಹಳ್ಳಿ ವಲಯ ಶೆಟ್ಟಿಹಳ್ಳಿಯ ಶಿವಕುಮಾರ ಸ್ವಾಮೀಜಿ ಯೋಗಮಂದಿರ, ಬೊಮ್ಮನಹಳ್ಳಿ ವಲಯದ ಎಚ್.ಎಸ್.ಆರ್ ಬಿಡಿಎ ಕಾಂಪ್ಲೆಕ್ಸ್, ಮಹದೇವಪುರ ವಲಯದ ಫಿನಿಕ್ಸ್ ಮಾಲ್, ಆರ್.ಆರ್.ನಗರ ವಲಯ ಯಶವಂತಪುರದಲ್ಲಿನ ರಾಯಲ್ ಮಾರ್ಟ್ ಬಳಿ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.</p>.<p>ಎಚ್.ಎಸ್.ಆರ್ ಬಿಡಿಎ ಕಾಂಪ್ಲೆಕ್ಸ್ ಬಳಿ ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನಕ್ಕೆ ಸುರಾನಾ ವಿದ್ಯಾಲಯದ ವಿದ್ಯಾರ್ಥಿಗಳು ಭೇಟಿ ನೀಡಿ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು.</p>.<p><strong>ಜಾಗೃತಿ ಜಾಥಾ:</strong> ಬಿಬಿಎಂಪಿಯ ಎಲ್ಲಾ ವಾಡ್೯ಗಳಲ್ಲಿ ಜಾಗೃತಿ ಜಾಥಾ ನಡೆಯಿತು. ಪೂರ್ವ ವಲಯದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ 3 ಸಾವಿರ ವಿದ್ಯಾರ್ಥಿಗಳು ಮತ್ತು ಎಸ್.ಪಿ.ಸಿ, ಎನ್.ಎಸ್.ಎಸ್ ಮತ್ತು ಶಾಲಾ ಕಾಲೇಜು ಸಮವಸ್ತ್ರ 2 ಸಾವಿರ ಸೇರಿ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳುಜಾಥಾದಲ್ಲಿ ಭಾಗವಹಿಸಿದ್ದರು.</p>.<p>ಕ್ಲೀವ್ ಲ್ಯಾಂಡ್ ಟೌನ್ ಬಿಬಿಎಂಪಿ ಶಿಕ್ಷಣ ಸಂಸ್ಥೆಗಳ ಆವರಣದಿಂದ ಪ್ರಾರಂಭವಾದ ಜಾಥಾ ಫ್ರೇಜರ್ ಟೌನ್ನ ಪ್ರಮುಖ ರಸ್ತೆಗಳಲ್ಲಿ ಸಾಗಿದ್ದು, ಬ್ಯಾಂಡ್ ಸೆಟ್, ತಮಟೆ ವಾದನ ಗಮನಸೆಳೆದವು.ರಾಜಾಜಿನಗರ, ಪದ್ಮನಾಭನಗರ ಸೇರಿದಂತೆ ಇನ್ನಿತರೆ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>