ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್. ವೇಣುಗೋಪಾಲ್, ‘ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ವಿವಿಧ ಧರ್ಮಗಳಿಗೆ ಬೇರೆ ಬೇರೆ ಧರ್ಮ ಗ್ರಂಥಗಳಿವೆ. ಆದರೆ, ಇಡೀ ಭಾರತೀಯರಿಗೆ ಸಂವಿಧಾನ ಏಕಮೇವ ಗ್ರಂಥವಾಗಿದ್ದು, ಪ್ರತಿಯೊಬ್ಬರೂ ಇದನ್ನು ಅರ್ಥೈಸಿಕೊಳ್ಳಬೇಕು. ನಂಬಿಕೆ, ಆತ್ಮವಿಶ್ವಾಸ ಹೊಂದಿದ್ದವರಿಗೆ ದೇವರ ಅಗತ್ಯ ಕೂಡಾ ಇರುವುದಿಲ್ಲ’ ಎಂದು ತಿಳಿಸಿದರು.