<p><strong>ಬೆಂಗಳೂರು</strong>: ‘ಭಾರತೀಯ ಸಂಸ್ಕೃತಿ ಎಂದರೆ ವೈದಿಕ ಸಂಸ್ಕೃತಿಯೊಂದೇ ಅಲ್ಲ. ಬುಡಕಟ್ಟು ಸಹಿತ ಎಲ್ಲ ಸಮುದಾಯಗಳ ಸಂಸ್ಕೃತಿ ಸೇರಿರುವುದೇ ಭಾರತೀಯ ಸಂಸ್ಕೃತಿ’ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.</p>.<p>ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯ, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ನಾಟಕ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಜಂಟಿಯಾಗಿ ಹಮ್ಮಿಕೊಂಡಿರುವ ‘ಭಾರತ ರಂಗ ಮಹೋತ್ಸವ’ ಅಂತರರಾಷ್ಟ್ರೀಯ ನಾಟಕೋತ್ಸವದಲ್ಲಿ ಐದನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಹುಸಂಸ್ಕೃತಿಯೇ ದೇಶದ ಸಂಸ್ಕೃತಿಯಾಗಿದೆ. ಯಾವುದೇ ದೇಶದ ಶ್ರೀಮಂತಿಕೆಯನ್ನು ಆರ್ಥಿಕ ಮಾನದಂಡದಲ್ಲಿ ನೋಡದೇ ಕಲೆ, ಸಂಸ್ಕೃತಿಯ ಶ್ರೀಮಂತಿಕೆಯ ಆಧಾರದಲ್ಲಿ ಅಳೆಯಬೇಕು. ಅಂಥ ಕಲಾ ಸಂಸ್ಕೃತಿಗಳನ್ನು ಬಿಂಬಿಸುವ ಕಾರ್ಯ ರಂಗಮಹೋತ್ಸವದಲ್ಲಿ ನಡೆಯುತ್ತಿದೆ ಎಂದು ಶ್ಲಾಘಿಸಿದರು.</p>.<p>ಉತ್ಸವ ಗೌರವವನ್ನು ಸ್ವೀಕರಿಸಿದ ರಂಗಭೂಮಿ ಕಲಾವಿದ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ‘ಭಾರತ ರಂಗ ಮಹೋತ್ಸವವು ಭಾರತೀಯ ರಂಗಭೂಮಿಗೆ ಹೊಸ ದಿಕ್ಕನ್ನು ತೋರಿಸುತ್ತಿದೆ. ಐದು ವೇದಿಕೆಗಳಲ್ಲಿ ವಿಭಿನ್ನ ರಂಗ ಪ್ರಯೋಗಗಳನ್ನು ಮಾಡುವ ಮೂಲಕ ವೈವಿಧ್ಯವನ್ನು ಕಟ್ಟಿಕೊಡುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘1,800ಕ್ಕೂ ಅಧಿಕ ಕಲಾವಿದರು ಈ ರಂಗಮಹೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ರಂಗಭೂಮಿಯನ್ನು ರಂಗ ದಿಗ್ಗಜರು ಕಟ್ಟಿಹೋಗಿದ್ದು, ಕರ್ನಾಟಕದ ರಂಗಭೂಮಿಯು ಭಾರತೀಯ ರಂಗಭೂಮಿಗೆ ಮಾರ್ಗದರ್ಶನ ಮಾಡುವಷ್ಟು ಬೆಳೆದು ನಿಂತಿದೆ’ ಎಂದು ಹೇಳಿದರು.</p>.<p>ಚಿತ್ರ ನಿರ್ದೇಶಕ ಬಿ.ಸುರೇಶ್ ಉಪಸ್ಥಿತರಿದ್ದರು. ಜೋಗತಿ ನೃತ್ಯ, ಬಂಜಾರ ನೃತ್ಯ, ‘ರೋಮಿಯೊ ಆ್ಯಂಡ್ ಜೂಲಿಯಟ್’ ನಾಟಕ ಸಹಿತ ವಿವಿಧ ರಂಗಪ್ರಸ್ತುತಿಗಳು ಬುಧವಾರ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಭಾರತೀಯ ಸಂಸ್ಕೃತಿ ಎಂದರೆ ವೈದಿಕ ಸಂಸ್ಕೃತಿಯೊಂದೇ ಅಲ್ಲ. ಬುಡಕಟ್ಟು ಸಹಿತ ಎಲ್ಲ ಸಮುದಾಯಗಳ ಸಂಸ್ಕೃತಿ ಸೇರಿರುವುದೇ ಭಾರತೀಯ ಸಂಸ್ಕೃತಿ’ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.</p>.<p>ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯ, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ನಾಟಕ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಜಂಟಿಯಾಗಿ ಹಮ್ಮಿಕೊಂಡಿರುವ ‘ಭಾರತ ರಂಗ ಮಹೋತ್ಸವ’ ಅಂತರರಾಷ್ಟ್ರೀಯ ನಾಟಕೋತ್ಸವದಲ್ಲಿ ಐದನೇ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಹುಸಂಸ್ಕೃತಿಯೇ ದೇಶದ ಸಂಸ್ಕೃತಿಯಾಗಿದೆ. ಯಾವುದೇ ದೇಶದ ಶ್ರೀಮಂತಿಕೆಯನ್ನು ಆರ್ಥಿಕ ಮಾನದಂಡದಲ್ಲಿ ನೋಡದೇ ಕಲೆ, ಸಂಸ್ಕೃತಿಯ ಶ್ರೀಮಂತಿಕೆಯ ಆಧಾರದಲ್ಲಿ ಅಳೆಯಬೇಕು. ಅಂಥ ಕಲಾ ಸಂಸ್ಕೃತಿಗಳನ್ನು ಬಿಂಬಿಸುವ ಕಾರ್ಯ ರಂಗಮಹೋತ್ಸವದಲ್ಲಿ ನಡೆಯುತ್ತಿದೆ ಎಂದು ಶ್ಲಾಘಿಸಿದರು.</p>.<p>ಉತ್ಸವ ಗೌರವವನ್ನು ಸ್ವೀಕರಿಸಿದ ರಂಗಭೂಮಿ ಕಲಾವಿದ ‘ಮುಖ್ಯಮಂತ್ರಿ’ ಚಂದ್ರು ಮಾತನಾಡಿ, ‘ಭಾರತ ರಂಗ ಮಹೋತ್ಸವವು ಭಾರತೀಯ ರಂಗಭೂಮಿಗೆ ಹೊಸ ದಿಕ್ಕನ್ನು ತೋರಿಸುತ್ತಿದೆ. ಐದು ವೇದಿಕೆಗಳಲ್ಲಿ ವಿಭಿನ್ನ ರಂಗ ಪ್ರಯೋಗಗಳನ್ನು ಮಾಡುವ ಮೂಲಕ ವೈವಿಧ್ಯವನ್ನು ಕಟ್ಟಿಕೊಡುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ‘1,800ಕ್ಕೂ ಅಧಿಕ ಕಲಾವಿದರು ಈ ರಂಗಮಹೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ರಂಗಭೂಮಿಯನ್ನು ರಂಗ ದಿಗ್ಗಜರು ಕಟ್ಟಿಹೋಗಿದ್ದು, ಕರ್ನಾಟಕದ ರಂಗಭೂಮಿಯು ಭಾರತೀಯ ರಂಗಭೂಮಿಗೆ ಮಾರ್ಗದರ್ಶನ ಮಾಡುವಷ್ಟು ಬೆಳೆದು ನಿಂತಿದೆ’ ಎಂದು ಹೇಳಿದರು.</p>.<p>ಚಿತ್ರ ನಿರ್ದೇಶಕ ಬಿ.ಸುರೇಶ್ ಉಪಸ್ಥಿತರಿದ್ದರು. ಜೋಗತಿ ನೃತ್ಯ, ಬಂಜಾರ ನೃತ್ಯ, ‘ರೋಮಿಯೊ ಆ್ಯಂಡ್ ಜೂಲಿಯಟ್’ ನಾಟಕ ಸಹಿತ ವಿವಿಧ ರಂಗಪ್ರಸ್ತುತಿಗಳು ಬುಧವಾರ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>