‘ಡಾ. ನಾಗೇಂದ್ರ ಅವರು ಕತ್ಯವ್ಯವೇ ಮೊದಲು ಎಂಬ ತತ್ವವನ್ನು ಪಾಲಿಸಿ, ಸತತ ದುಡಿಯುತ್ತಿದ್ದರು. ಅವರ ಆತ್ಮಹತ್ಯೆ ನಿಜಕ್ಕೂ ದಿಘ್ಭ್ರಮೆಯನ್ನು ಮೂಡಿಸಿದೆ. ನಿರಂತರ ಒತ್ತಡ ಹಾಗೂ ಅತ್ಯಂತ ಸಂಕೀರ್ಣ ವ್ಯವಸ್ಥೆಯ ನಡುವೆ ಸೇವೆ ಸಲ್ಲಿಸುತ್ತಿರುವ ಅವರನ್ನು ಕಳೆದುಕೊಂಡಿರುವುದು ವಿಷಾದನೀಯ. ಈ ರೀತಿಯ ಅನಾಹುತಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು. ಸರ್ಕಾರವು ವೈದ್ಯರನ್ನು ಬೆದರಿಸುವ, ಕಾನೂನಿನ ಗುಮ್ಮ ತೋರಿಸುವುದನ್ನು ಬಿಟ್ಟು, ಸೌಹಾರ್ದಯುತವಾಗಿ ನಡೆಸಿಕೊಳ್ಳಬೇಕು. ಈ ಘಟನೆಗೆ ಕಾರಣವಾದವರನ್ನು ಕೂಡಲೇ ಶಿಕ್ಷಿಸಬೇಕು’ ಎಂದು ಐಎಂಎ ಕರ್ನಾಟಕ ಶಾಖೆಯ ಅಧ್ಯಕ್ಷ ಡಾ. ಮಧುಸೂದನ ಕಾರಿಗನೂರು ಆಗ್ರಹಿಸಿದ್ದಾರೆ.