ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಲೋಕಸಭೆ ಚುನಾವಣೆ ನಂತರ ಕೆಪಿಸಿಸಿ ಪದಾಧಿಕಾರಿಗಳನ್ನು ಅಧಿಕಾರದಿಂದ ಕೆಳಗೆ ಇಳಿಸಿದ್ದು,ಹೊಸದಾಗಿ ನೇಮಕ ನಡೆದಿಲ್ಲ. ಪದಾಧಿಕಾರಿಗಳ ನೇಮಕ ಸಂಬಂಧ ಅಭಿಪ್ರಾಯ ಸಂಗ್ರ ಹಿಸಲುಮುಖಂಡ ಗುಲಾಂ ನಬಿ ಆಜಾದ್ ಬೆಂಗಳೂರಿಗೆ ಬಂದಿದ್ದರೂ, ಸಭೆ ನಡೆಸಲು ಸಾಧ್ಯವಾಗಿಲ್ಲ. ಈಗ ದೆಹಲಿಯಲ್ಲೇ ಚರ್ಚಿಸುವ ಸಾಧ್ಯತೆಗಳಿದ್ದು, ಯುವಕರು ಹಾಗೂ ಹೊಸ ಮುಖಗಳಿಗೆ ಪಟ್ಟಿಯಲ್ಲಿ ಆದ್ಯತೆ ನೀಡುವ ಕುರಿತು ಸೋನಿಯಾ ಅವರಿಗೆ ರಾಜ್ಯದ ಮುಖಂಡರು ವಿವರ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.