‘ಭಾರತೀಯ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ ಹಾಗೂ ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತೆ, ಟೇಬಲ್ ಟೆನ್ನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರಿಗೆ ರಾಜೀವ್ಗಾಂಧಿ ಖೇಲ್ ರತ್ನ ಪುರಸ್ಕಾರ ಸಂದಿದೆ. ಇವರು ನಮ್ಮ ಕಂಪನಿಯ ಉದ್ಯೋಗಿಗಳು ಎನ್ನುವುದು ಹೆಮ್ಮೆಯ ವಿಚಾರ. ಇಬ್ಬರನ್ನೂ ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ’ ಎಂದು ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ರಂಜನ್ ಕುಮಾರ್ ಮಹಾಪಾತ್ರ ಹೇಳಿದ್ದಾರೆ.