ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಮಾತನಾಡಿ, ‘ಕೋವಿಡ್ ಮಾರ್ಗಸೂಚಿ ಪ್ರಕಾರ ಕಾರ್ಯಕ್ರಮ ನಡೆಸಲಾಗುತ್ತಿದೆ. ಕೆಎಸ್ಆರ್ಪಿ, ಮಹಿಳಾ ಪೊಲೀಸ್, ಬಿಎಸ್ಎಫ್ ಸೇರಿ 16 ತುಕಡಿಗಳು, 4 ಬ್ಯಾಂಡ್ ಸೇರಿ 20 ತಂಡಗಳು ಕವಾಯುತು ನಡೆಸಲಿದ್ದು, ದಕ್ಷಿಣ ವಲಯದ ಡಿಸಿಪಿ ಗಿರೀಶ್ ಉಸ್ತುವಾರಿ ವಹಿಸಲಿದ್ದಾರೆ’ ಎಂದು ವಿವರಿಸಿದರು.