ಸೋಮವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇಂದಿರಾ ಕ್ಯಾಂಟೀನ್ಗಳಿಗೆ ಅನ್ನಪೂರ್ಣೇಶ್ವರಿ ಹೆಸರು ಇಡುವಂತೆ ಬಿಜೆಪಿಯ ಹಲವು ಮುಖಂಡರು ಒತ್ತಾಯ ಮಾಡಿದ್ದಾರೆ. ಒಂದೊಂದು ಸರ್ಕಾರ ಅಧಿಕಾರಕ್ಕೆ ಬಂದಾಗ ಒಬ್ಬೊಬ್ಬರ ಹೆಸರು ಇಡುತ್ತಾ ಹೋಗುವುದು ಸರಿಯಲ್ಲ. ಶಾಶ್ವತವಾಗಿ ಒಂದು ಹೆಸರು ಇಡಬೇಕು ಎಂದು ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿಯವರು ಈ ಬಗ್ಗೆ ನಮ್ಮೊಂದಿಗೆ ಚರ್ಚೆ ಮಾಡಿಲ್ಲ’ ಎಂದರು.