<p><strong>ಬೆಂಗಳೂರು:</strong> ನಾಯಂಡಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ನ ಅಡುಗೆ ಮನೆಯನ್ನು ತೆರವುಗೊಳಿಸಿ ದೀಪಾಂಜಲಿನಗರದಲ್ಲಿ ನಿರ್ಮಿಸಲು ಬಿಬಿಎಂಪಿ ನಿರ್ಧರಿಸಿದೆ. ನಿರ್ಮಿಸಿದ ಮೂರೇ ವರ್ಷಗಳಲ್ಲಿ ಅಡುಗೆ ಮನೆಯನ್ನು ಸ್ಥಳಾಂತರಿಸುವ ನಡೆ ವಿವಾದಕ್ಕೆ ಕಾರಣವಾಗಿದೆ.</p>.<p>‘ನಾಯಂಡಹಳ್ಳಿ ರೈಲ್ವೆ ನಿಲ್ದಾಣದ ಬಳಿ ಈಗಿರುವ ಜಾಗವು ಅಡುಗೆ ತಯಾರಿಸುವುದಕ್ಕೆ ಪ್ರಶಸ್ತವಾಗಿಲ್ಲ. ಹಾಗಾಗಿ ಅದನ್ನು ಸ್ಥಳಾಂತರ ಮಾಡುವುದು ಅನಿವಾರ್ಯ’ ಎಂದು ವಸತಿ ಸಚಿವ ವಿ.ಸೋಮಣ್ಣ ಸಮರ್ಥಿಸಿಕೊಂಡಿದ್ದಾರೆ.</p>.<p>‘ಅಡುಗೆ ಮನೆಯ ಸುತ್ತಮುತ್ತ ಗಲೀಜು ವಾತಾವರಣವಿದೆ. ಅಲ್ಲಿ ಸದಾ ಬೀದಿನಾಯಿಗಳು ಬೀಡುಬಿಟ್ಟಿರುತ್ತವೆ. ಪಾಲಿಕೆ ಅಧಿಕಾರಿಗಳು ಅಡುಗೆ ಮನೆ ನಿರ್ಮಿಸಲು ಈ ಜಾಗ ಆಯ್ಕೆ ಮಾಡಿಕೊಂಡಿದ್ದೇ ಸರಿಯಲ್ಲ. ಗಬ್ಬುನಾತ ಬೀರುವ ಜಾಗದಲ್ಲಿ ಅಡುಗೆ ತಯಾರಿಸುವುದು ಸೂಕ್ತವಲ್ಲ. ಹಾಗಾಗಿ ಈಗಲಾದರೂ ಅದನ್ನು ಸ್ಥಳಾಂತರ ಮಾಡಿ ಸೂಚಿಸಿದ್ದೇನೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಹಣ ಪೋಲು:</strong> ‘ಕ್ಯಾಂಟೀನ್ ಸ್ಥಳಾಂತರದಿಂದ ಸರ್ಕಾರದ ಹಣ ಪೋಲಾಗಲಿದೆ’ ಎಂದು ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಆರೋಪಿಸಿದರು.</p>.<p>‘ಈ ಅಡುಗೆ ಮನೆಯಿಂದ ಸುಮಾರು 30 ಕ್ಯಾಂಟೀನ್ಗಳಿಗೆ ಸಿದ್ಧ ಆಹಾರ ಪೂರೈಕೆಯಾಗುತ್ತದೆ. ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಅಡುಗೆ ಮನೆಯನ್ನು ಏಕಾಏಕಿ ತೆರವುಗೊಳಿಸುವುದರಿಂದ ಸರ್ಕಾರದ ಹಣ ವ್ಯರ್ಥವಾಗಲಿದೆ. ಅಡುಗೆ ಮನೆ ಇರುವ ಜಾಗವು ಕರ್ನಾಟಕ ಗೃಹಮಂಡಳಿಗೆ ಸೇರಿದ್ದು ಎಂದು ಈಗ ಹೇಳಲಾಗುತ್ತಿದೆ. ಅಲ್ಲಿ ಅಡುಗೆ ಮನೆ ನಿರ್ಮಿಸಿದ್ದಾದರೂ ಏಕೆ’ ಎಂದು ವಾಜಿದ್ ಪ್ರಶ್ನಿಸಿದರು.</p>.<p>‘ಅಡುಗೆ ಮನೆ ಸ್ಥಳಾಂತರಿಸಲು ಎರಡು ತಿಂಗಳಿನಿಂದ ಸಿದ್ಧತೆ ಮಾಡಿಕೊಂಡಿದ್ದೇವೆ. ದೀಪಾಂಜಲಿನಗರದ ಬಳಿ ಹೊಸ ಅಡುಗೆ ಮನೆ ಸಿದ್ಧವಾಗಿದೆ. ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆಗೆ ಸಮಸ್ಯೆ ಉಂಟಾಗದು’ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾಯಂಡಹಳ್ಳಿಯಲ್ಲಿ ಇಂದಿರಾ ಕ್ಯಾಂಟೀನ್ನ ಅಡುಗೆ ಮನೆಯನ್ನು ತೆರವುಗೊಳಿಸಿ ದೀಪಾಂಜಲಿನಗರದಲ್ಲಿ ನಿರ್ಮಿಸಲು ಬಿಬಿಎಂಪಿ ನಿರ್ಧರಿಸಿದೆ. ನಿರ್ಮಿಸಿದ ಮೂರೇ ವರ್ಷಗಳಲ್ಲಿ ಅಡುಗೆ ಮನೆಯನ್ನು ಸ್ಥಳಾಂತರಿಸುವ ನಡೆ ವಿವಾದಕ್ಕೆ ಕಾರಣವಾಗಿದೆ.</p>.<p>‘ನಾಯಂಡಹಳ್ಳಿ ರೈಲ್ವೆ ನಿಲ್ದಾಣದ ಬಳಿ ಈಗಿರುವ ಜಾಗವು ಅಡುಗೆ ತಯಾರಿಸುವುದಕ್ಕೆ ಪ್ರಶಸ್ತವಾಗಿಲ್ಲ. ಹಾಗಾಗಿ ಅದನ್ನು ಸ್ಥಳಾಂತರ ಮಾಡುವುದು ಅನಿವಾರ್ಯ’ ಎಂದು ವಸತಿ ಸಚಿವ ವಿ.ಸೋಮಣ್ಣ ಸಮರ್ಥಿಸಿಕೊಂಡಿದ್ದಾರೆ.</p>.<p>‘ಅಡುಗೆ ಮನೆಯ ಸುತ್ತಮುತ್ತ ಗಲೀಜು ವಾತಾವರಣವಿದೆ. ಅಲ್ಲಿ ಸದಾ ಬೀದಿನಾಯಿಗಳು ಬೀಡುಬಿಟ್ಟಿರುತ್ತವೆ. ಪಾಲಿಕೆ ಅಧಿಕಾರಿಗಳು ಅಡುಗೆ ಮನೆ ನಿರ್ಮಿಸಲು ಈ ಜಾಗ ಆಯ್ಕೆ ಮಾಡಿಕೊಂಡಿದ್ದೇ ಸರಿಯಲ್ಲ. ಗಬ್ಬುನಾತ ಬೀರುವ ಜಾಗದಲ್ಲಿ ಅಡುಗೆ ತಯಾರಿಸುವುದು ಸೂಕ್ತವಲ್ಲ. ಹಾಗಾಗಿ ಈಗಲಾದರೂ ಅದನ್ನು ಸ್ಥಳಾಂತರ ಮಾಡಿ ಸೂಚಿಸಿದ್ದೇನೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಹಣ ಪೋಲು:</strong> ‘ಕ್ಯಾಂಟೀನ್ ಸ್ಥಳಾಂತರದಿಂದ ಸರ್ಕಾರದ ಹಣ ಪೋಲಾಗಲಿದೆ’ ಎಂದು ಪಾಲಿಕೆಯ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಆರೋಪಿಸಿದರು.</p>.<p>‘ಈ ಅಡುಗೆ ಮನೆಯಿಂದ ಸುಮಾರು 30 ಕ್ಯಾಂಟೀನ್ಗಳಿಗೆ ಸಿದ್ಧ ಆಹಾರ ಪೂರೈಕೆಯಾಗುತ್ತದೆ. ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಅಡುಗೆ ಮನೆಯನ್ನು ಏಕಾಏಕಿ ತೆರವುಗೊಳಿಸುವುದರಿಂದ ಸರ್ಕಾರದ ಹಣ ವ್ಯರ್ಥವಾಗಲಿದೆ. ಅಡುಗೆ ಮನೆ ಇರುವ ಜಾಗವು ಕರ್ನಾಟಕ ಗೃಹಮಂಡಳಿಗೆ ಸೇರಿದ್ದು ಎಂದು ಈಗ ಹೇಳಲಾಗುತ್ತಿದೆ. ಅಲ್ಲಿ ಅಡುಗೆ ಮನೆ ನಿರ್ಮಿಸಿದ್ದಾದರೂ ಏಕೆ’ ಎಂದು ವಾಜಿದ್ ಪ್ರಶ್ನಿಸಿದರು.</p>.<p>‘ಅಡುಗೆ ಮನೆ ಸ್ಥಳಾಂತರಿಸಲು ಎರಡು ತಿಂಗಳಿನಿಂದ ಸಿದ್ಧತೆ ಮಾಡಿಕೊಂಡಿದ್ದೇವೆ. ದೀಪಾಂಜಲಿನಗರದ ಬಳಿ ಹೊಸ ಅಡುಗೆ ಮನೆ ಸಿದ್ಧವಾಗಿದೆ. ಇಂದಿರಾ ಕ್ಯಾಂಟೀನ್ಗಳಿಗೆ ಆಹಾರ ಪೂರೈಕೆಗೆ ಸಮಸ್ಯೆ ಉಂಟಾಗದು’ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>