<p><strong>ಬೆಂಗಳೂರು</strong>: ಇಂದಿರಾನಗರದ 18ನೇ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಕಾರೊಂದು ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು ಪಾದಚಾರಿ ಮಾರ್ಗದತ್ತ ನುಗ್ಗಿದ್ದು, ಅಲ್ಲಿದ್ದ ಆರು ಮಂದಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಜ.8ರಂದು ರಾತ್ರಿ 11.34ರ ಸುಮಾರಿಗೆ ಅವಘಾತ ಸಂಭವಿಸಿದೆ.</p>.<p>ರಸ್ತೆ ಪಕ್ಕದಲ್ಲಿನ ಹೋಟೆಲ್ನಲ್ಲಿರುವ ಸಿಸಿಸಿಟಿ ಕ್ಯಾಮೆರಾದಲ್ಲಿ ರಸ್ತೆಯ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸೆರೆಯಾಗಿದೆ. ಆ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>ಡೇರಿಕ್ ಟೋನಿ (42) ಕಾರು ಚಾಲನೆ ಮಾಡುತ್ತಿದ್ದರು. ಕಾರನ್ನು ಎಡ ಭಾಗಕ್ಕೆ ತೆಗೆದುಕೊಳ್ಳುವ ಬದಲಿಗೆ ಬಲಕ್ಕೆ ತೆಗೆದುಕೊಂಡಿದ್ದರಿಂದ ಈ ಅವಘಡ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು, ವಿಭಜಕದ ಮೇಲೆ ಹತ್ತಿ ರಸ್ತೆಯ ಮತ್ತೊಂದು ಬದಿಗೆ ಹಾರಿ ಬಂದು ಹೋಟೆಲ್ ಕಟ್ಟಡಕ್ಕೆ ಡಿಕ್ಕಿಯಾಗಿದೆ. ಊಟ ಮುಗಿಸಿಕೊಂಡು ಹೋಟೆಲ್ ಮುಂದೆ ನಿಂತಿದ್ದವರು ತಕ್ಷಣವೇ ಪಕ್ಕಕ್ಕೆ ಜಿಗಿದು ಪಾರಾಗಿದ್ದಾರೆ. </p>.<p>ಚಾಲಕ ಮದ್ಯಪಾನ ಮಾಡಿದ್ದರಿಂದ ಅಪಘಾತ ಸಂಭವಿಸಿದೆ ಎಂಬುದು ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಜೀವನ್ವಿಮಾ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇಂದಿರಾನಗರದ 18ನೇ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಕಾರೊಂದು ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು ಪಾದಚಾರಿ ಮಾರ್ಗದತ್ತ ನುಗ್ಗಿದ್ದು, ಅಲ್ಲಿದ್ದ ಆರು ಮಂದಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಜ.8ರಂದು ರಾತ್ರಿ 11.34ರ ಸುಮಾರಿಗೆ ಅವಘಾತ ಸಂಭವಿಸಿದೆ.</p>.<p>ರಸ್ತೆ ಪಕ್ಕದಲ್ಲಿನ ಹೋಟೆಲ್ನಲ್ಲಿರುವ ಸಿಸಿಸಿಟಿ ಕ್ಯಾಮೆರಾದಲ್ಲಿ ರಸ್ತೆಯ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆಯುತ್ತಿರುವ ದೃಶ್ಯ ಸೆರೆಯಾಗಿದೆ. ಆ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>ಡೇರಿಕ್ ಟೋನಿ (42) ಕಾರು ಚಾಲನೆ ಮಾಡುತ್ತಿದ್ದರು. ಕಾರನ್ನು ಎಡ ಭಾಗಕ್ಕೆ ತೆಗೆದುಕೊಳ್ಳುವ ಬದಲಿಗೆ ಬಲಕ್ಕೆ ತೆಗೆದುಕೊಂಡಿದ್ದರಿಂದ ಈ ಅವಘಡ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು, ವಿಭಜಕದ ಮೇಲೆ ಹತ್ತಿ ರಸ್ತೆಯ ಮತ್ತೊಂದು ಬದಿಗೆ ಹಾರಿ ಬಂದು ಹೋಟೆಲ್ ಕಟ್ಟಡಕ್ಕೆ ಡಿಕ್ಕಿಯಾಗಿದೆ. ಊಟ ಮುಗಿಸಿಕೊಂಡು ಹೋಟೆಲ್ ಮುಂದೆ ನಿಂತಿದ್ದವರು ತಕ್ಷಣವೇ ಪಕ್ಕಕ್ಕೆ ಜಿಗಿದು ಪಾರಾಗಿದ್ದಾರೆ. </p>.<p>ಚಾಲಕ ಮದ್ಯಪಾನ ಮಾಡಿದ್ದರಿಂದ ಅಪಘಾತ ಸಂಭವಿಸಿದೆ ಎಂಬುದು ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಜೀವನ್ವಿಮಾ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>