‘ಇಂದಿರಾನಗರ ಬಳಿಯ ಲಕ್ಷ್ಮಿಪುರ ಸಮೀಪದ ಸ್ಮಶಾನದಲ್ಲಿ ರಾಜೇಶ್ ಹಾಗೂ ಮುರುಗೇಶ್ ಶನಿವಾರ ಬೆಳಿಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಅದನ್ನು ಗಮನಿಸಿದ್ದ ಸ್ಥಳೀಯರು ಹತ್ತಿರ ಹೋಗಿ ನೋಡಿದ್ದರು. ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಉಸಿರಾಡುತ್ತಿದ್ದ ಮುರುಗೇಶ್ ಅವರನ್ನು ಸ್ಥಳೀಯರೇ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದರು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.