<p><strong>ಬೆಂಗಳೂರು:</strong>‘ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಕೈಗಾರಿಕಾ ನೀತಿ ಅಥವಾ ಕರ್ನಾಟಕ ನೀತಿ 2019-23ರ ಕರಡು ರೂಪಿಸಲಾಗಿದ್ದು, ಶೀಘ್ರದಲ್ಲೇ ಜಾರಿಗೆ ತರಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ನಗರದಲ್ಲಿ ಶನಿವಾರಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೆಲಮಂಗಲ ಹಾಗೂ ಹರಿಹರ ವಸಾಹತುಗಳ ಸಣ್ಣ ಉದ್ದಿಮೆದಾರರಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.</p>.<p>‘ಸಣ್ಣ ಕೈಗಾರಿಕೆಗಳು ಕಳೆದ ಸಾಲಿನಲ್ಲಿ ಪಾವತಿಸಬೇಕಾಗಿರುವ ಆಸ್ತಿ ತೆರಿಗೆ ಮೇಲಿನ ಬಡ್ಡಿದರವನ್ನು ಮನ್ನಾ ಮಾಡುವುದಾಗಿ ಸರ್ಕಾರ ಈಗಾಗಲೇ ಘೋಷಿಸಿದೆ. ಆದರೆ, ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಬಡ್ಡಿ ಮನ್ನಾಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಸಣ್ಣ ಕೈಗಾರಿಕೆಗಳು ವಿದ್ಯುತ್ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕಾಗಿದ್ದಲ್ಲಿ ಎಸ್ಕಾಂಗಳಿಂದ ಸ್ವಾಧೀನಾನುಭವ ಪತ್ರ ಪಡೆದುಕೊಳ್ಳಬೇಕು. ಹಲವು ಸಣ್ಣ ಕೈಗಾರಿಕೆಗಳು ಈ ಪ್ರಮಾಣಪತ್ರ ಹೊಂದಿರದ ಕಾರಣ, ಕೈಗಾರಿಕೆಗಳ ವಿಸ್ತರಣೆಗೆ ಅಡಚಣೆಯಾಗಿದೆ. ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ನೆಲಮಂಗಲದ 240 ಮತ್ತು ಹರಿಹರದ 78 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.</p>.<p class="Subhead">ಪೋರ್ಟಲ್– ಕೈಟ್ ಚಿಹ್ನೆ ಬಿಡುಗಡೆ:ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕಾ ಉದ್ಯಮಗಳಲ್ಲಿನ ಕಚ್ಚಾ ವಸ್ತುಗಳ ಮಾರಾಟ ಮತ್ತು ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಕಾಸಿಯಾ ರೂಪಿಸಿದ kassia.msmemall.com ವೆಬ್ ಪೋರ್ಟಲ್ ಅನಾವರಣಗೊಳಿಸಲಾಯಿತು. ಈ ಪೋರ್ಟಲ್ ಮೂಲಕವೇ ವಹಿವಾಟು ನಡೆಸಿದರೆ, ಉದ್ಯಮಗಳಲ್ಲಿನ ಬಳಕೆ ಮಾಡಿ ಉಳಿದಿರುವ ವಸ್ತುಗಳು ಕಡಿಮೆ ಬೆಲೆಗೆ ಸಿಗಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಕೈಗಾರಿಕಾ ನೀತಿ ಅಥವಾ ಕರ್ನಾಟಕ ನೀತಿ 2019-23ರ ಕರಡು ರೂಪಿಸಲಾಗಿದ್ದು, ಶೀಘ್ರದಲ್ಲೇ ಜಾರಿಗೆ ತರಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ನಗರದಲ್ಲಿ ಶನಿವಾರಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೆಲಮಂಗಲ ಹಾಗೂ ಹರಿಹರ ವಸಾಹತುಗಳ ಸಣ್ಣ ಉದ್ದಿಮೆದಾರರಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದರು.</p>.<p>‘ಸಣ್ಣ ಕೈಗಾರಿಕೆಗಳು ಕಳೆದ ಸಾಲಿನಲ್ಲಿ ಪಾವತಿಸಬೇಕಾಗಿರುವ ಆಸ್ತಿ ತೆರಿಗೆ ಮೇಲಿನ ಬಡ್ಡಿದರವನ್ನು ಮನ್ನಾ ಮಾಡುವುದಾಗಿ ಸರ್ಕಾರ ಈಗಾಗಲೇ ಘೋಷಿಸಿದೆ. ಆದರೆ, ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಬಡ್ಡಿ ಮನ್ನಾಗೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಸಣ್ಣ ಕೈಗಾರಿಕೆಗಳು ವಿದ್ಯುತ್ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕಾಗಿದ್ದಲ್ಲಿ ಎಸ್ಕಾಂಗಳಿಂದ ಸ್ವಾಧೀನಾನುಭವ ಪತ್ರ ಪಡೆದುಕೊಳ್ಳಬೇಕು. ಹಲವು ಸಣ್ಣ ಕೈಗಾರಿಕೆಗಳು ಈ ಪ್ರಮಾಣಪತ್ರ ಹೊಂದಿರದ ಕಾರಣ, ಕೈಗಾರಿಕೆಗಳ ವಿಸ್ತರಣೆಗೆ ಅಡಚಣೆಯಾಗಿದೆ. ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ನೆಲಮಂಗಲದ 240 ಮತ್ತು ಹರಿಹರದ 78 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು.</p>.<p class="Subhead">ಪೋರ್ಟಲ್– ಕೈಟ್ ಚಿಹ್ನೆ ಬಿಡುಗಡೆ:ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕಾ ಉದ್ಯಮಗಳಲ್ಲಿನ ಕಚ್ಚಾ ವಸ್ತುಗಳ ಮಾರಾಟ ಮತ್ತು ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಕಾಸಿಯಾ ರೂಪಿಸಿದ kassia.msmemall.com ವೆಬ್ ಪೋರ್ಟಲ್ ಅನಾವರಣಗೊಳಿಸಲಾಯಿತು. ಈ ಪೋರ್ಟಲ್ ಮೂಲಕವೇ ವಹಿವಾಟು ನಡೆಸಿದರೆ, ಉದ್ಯಮಗಳಲ್ಲಿನ ಬಳಕೆ ಮಾಡಿ ಉಳಿದಿರುವ ವಸ್ತುಗಳು ಕಡಿಮೆ ಬೆಲೆಗೆ ಸಿಗಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>