ಹಳೆ ಮೈಸೂರು ಭಾಗದಲ್ಲಿರುವ ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಕೈಗಾರಿಕಾ ಉದ್ದೇಶಕ್ಕೆ ಮರು ಬಳಕೆ ಮಾಡಲಾಗುತ್ತಿದೆ. ಆದರೆ, ಕುಡಿಯುವ ನೀರಿನ ಅಭಾವ ತೀವ್ರವಾಗಿದೆ. ನೀರಿನ ಲಭ್ಯತೆಯನ್ನು ಗುರುತಿಸಿ ಪೂರೈಕೆಗೆ ಯೋಜನೆ ರೂಪಿಸಬೇಕು. ಮುಂದಿನ ವಾರ ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದರು.