ಬೆಂಗಳೂರು: 'ಕಮಿಷನ್ ಹೆಸರಿನಲ್ಲಿ ಸುಳ್ಳು ಆರೋಪ ಮಾಡಿ ಹೆದರಿಸಲು ವಿರೋಧ ಪಕ್ಷದವರು ಯತ್ನಿಸುತ್ತಿದ್ದಾರೆ. ಯಾರನ್ನೋ ಹೆದರಿಸಿದಂತೆ ನನ್ನನ್ನು ಹೆದರಿಸಲು ಆಗದು' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸೋಮವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತಮಾಡಿದ ಅವರು, 'ಕಮಿಷನ್ ಆರೋಪ ಎಲ್ಲಿಂದ ಬಂತು? ಕಾಮಗಾರಿಗಳ ನೈಜತೆ ಪರಿಶೀಲಿಸಿ ಬಿಲ್ ಪಾವತಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ. ತನಿಖೆಗಾಗಿ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವರದಿ ಬರಲಿ, ಎಲ್ಲವೂ ಗೊತ್ತಾಗುತ್ತದೆ' ಎಂದರು.