ಇನ್ಫೊಸಿಸ್ ವಿಜ್ಞಾನ ಪ್ರತಿಷ್ಠಾನವು ಜಯನಗರದಲ್ಲಿ ಸ್ಥಾಪಿಸಿರುವ ನೂತನ ಕಚೇರಿಯನ್ನು ಆನ್ಲೈನ್ ವೇದಿಕೆಯ ಮೂಲಕ ಗುರುವಾರ ಉದ್ಘಾಟಿಸಿದ ಅವರು, ‘ದುರ್ಬಲ ವರ್ಗದವರಿಗೆ ಅಗತ್ಯ ಸೌಲಭ್ಯ ಒದಗಿಸುವ ಜತೆಗೆ ಅಪೌಷ್ಟಿಕತೆ ಸೇರಿ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಾಗ ದೇಶ ಪ್ರಗತಿ ಹೊಂದಲಿದೆ. ಅನಾರೋಗ್ಯ, ಅಪೌಷ್ಟಿಕತೆ ಒಳಗೊಂಡಂತೆ ವಿವಿಧ ಸಮಸ್ಯೆಗಳ ವಿರುದ್ಧ ಹೋರಾಡಲು ಸಂಶೋಧಕ ಯೋಧರನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಆಗಬೇಕು’ ಎಂದು ಹೇಳಿದರು.