<p><strong>ಬೆಂಗಳೂರು: </strong>ಬಾಂಗ್ಲಾದೇಶದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೂರ್ವ ವಿಭಾಗದ ಪೊಲೀಸರು, ಕೃತ್ಯದ ಬಳಿಕ ನಾಪತ್ತೆಯಾಗಿದ್ದ ಸಂತ್ರಸ್ತೆಯನ್ನು ಕೇರಳದಲ್ಲಿ ಪತ್ತೆ ಮಾಡಿ ನಗರಕ್ಕೆ ಕರೆತಂದಿದ್ದಾರೆ.</p>.<p>ಕೃತ್ಯದ ವಿಡಿಯೊ ಆಧರಿಸಿ ಇಬ್ಬರು ಮಹಿಳೆಯರು ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಸಂತ್ರಸ್ತೆ ಪತ್ತೆಗಾಗಿ ಮಹಿಳಾ ಇನ್ಸ್ಪೆಕ್ಟರ್ ನೇತೃತ್ವದ ತಂಡ ಕೇರಳಕ್ಕೆ ತೆರಳಿತ್ತು.</p>.<p>‘ಸಂತ್ರಸ್ತೆಯನ್ನು ಬಿಗಿ ಭದ್ರತೆಯಲ್ಲಿ ನಗರಕ್ಕೆ ಶನಿವಾರ ಬೆಳಿಗ್ಗೆ ಕರೆತರಲಾಗಿದೆ. ಘಟನೆ ಬಗ್ಗೆ ಸಂತ್ರಸ್ತೆ ಹೇಳಿಕೆ ಪಡೆದು ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಕೆ. ಚನ್ನಸಂದ್ರ ಬಳಿಯ ಮನೆಯೊಂದರಲ್ಲಿ ಕೃತ್ಯ ನಡೆದಿತ್ತು. ಮನೆಯನ್ನು ಸಂತ್ರಸ್ತೆ ಗುರುತಿಸಿದ್ದು, ಆರೋಪಿಗಳ ವರ್ತನೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ.’</p>.<p>‘ಸಂತ್ರಸ್ತೆ ಬಂಧಿತ ಆರೋಪಿಗಳ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಿದೆ. ಆ ಬಳಿಕ, ಆಕೆಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಗುವುದು’ ಎಂದೂ ಮೂಲಗಳು ಹೇಳಿವೆ.</p>.<p class="Subhead">ಸಂತ್ರಸ್ತೆ, ಬಂಧಿತರು ಅಕ್ರಮ ವಾಸಿಗಳು: ಸುದ್ದಿಗಾರರ ಜೊತೆ ಮಾತನಾಡಿದ ಎಸ್.ಡಿ. ಶರಣಪ್ಪ, ‘ವಿಡಿಯೊ ಮೂಲಕ ಕೃತ್ಯ ಬಯಲಿಗೆ ಬಂದಿದೆ. ಸಂತ್ರಸ್ತೆ ಹಾಗೂ ಆರೋಪಿಗಳು, ಬಾಂಗ್ಲಾದೇಶದಿಂದ ಬಂದು ಇಲ್ಲಿ ಅಕ್ರಮವಾಗಿ ವಾಸವಿದ್ದರು ಎಂಬುದು ಗೊತ್ತಾಗಿದೆ’ ಎಂದರು.</p>.<p>‘ಆರೋಪಿಗಳ ಹಿನ್ನೆಲೆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಅವರೆಲ್ಲರೂ ಸೇರಿ ಒಂದೇ ವೃತ್ತಿ ಮಾಡುತ್ತಿದ್ದ ಸಂಗತಿ ಗೊತ್ತಾಗಿದೆ. ವೃತ್ತಿ ಬಗ್ಗೆ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಾಂಗ್ಲಾದೇಶದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೂರ್ವ ವಿಭಾಗದ ಪೊಲೀಸರು, ಕೃತ್ಯದ ಬಳಿಕ ನಾಪತ್ತೆಯಾಗಿದ್ದ ಸಂತ್ರಸ್ತೆಯನ್ನು ಕೇರಳದಲ್ಲಿ ಪತ್ತೆ ಮಾಡಿ ನಗರಕ್ಕೆ ಕರೆತಂದಿದ್ದಾರೆ.</p>.<p>ಕೃತ್ಯದ ವಿಡಿಯೊ ಆಧರಿಸಿ ಇಬ್ಬರು ಮಹಿಳೆಯರು ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಸಂತ್ರಸ್ತೆ ಪತ್ತೆಗಾಗಿ ಮಹಿಳಾ ಇನ್ಸ್ಪೆಕ್ಟರ್ ನೇತೃತ್ವದ ತಂಡ ಕೇರಳಕ್ಕೆ ತೆರಳಿತ್ತು.</p>.<p>‘ಸಂತ್ರಸ್ತೆಯನ್ನು ಬಿಗಿ ಭದ್ರತೆಯಲ್ಲಿ ನಗರಕ್ಕೆ ಶನಿವಾರ ಬೆಳಿಗ್ಗೆ ಕರೆತರಲಾಗಿದೆ. ಘಟನೆ ಬಗ್ಗೆ ಸಂತ್ರಸ್ತೆ ಹೇಳಿಕೆ ಪಡೆದು ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಕೆ. ಚನ್ನಸಂದ್ರ ಬಳಿಯ ಮನೆಯೊಂದರಲ್ಲಿ ಕೃತ್ಯ ನಡೆದಿತ್ತು. ಮನೆಯನ್ನು ಸಂತ್ರಸ್ತೆ ಗುರುತಿಸಿದ್ದು, ಆರೋಪಿಗಳ ವರ್ತನೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ.’</p>.<p>‘ಸಂತ್ರಸ್ತೆ ಬಂಧಿತ ಆರೋಪಿಗಳ ಗುರುತನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಿದೆ. ಆ ಬಳಿಕ, ಆಕೆಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಗುವುದು’ ಎಂದೂ ಮೂಲಗಳು ಹೇಳಿವೆ.</p>.<p class="Subhead">ಸಂತ್ರಸ್ತೆ, ಬಂಧಿತರು ಅಕ್ರಮ ವಾಸಿಗಳು: ಸುದ್ದಿಗಾರರ ಜೊತೆ ಮಾತನಾಡಿದ ಎಸ್.ಡಿ. ಶರಣಪ್ಪ, ‘ವಿಡಿಯೊ ಮೂಲಕ ಕೃತ್ಯ ಬಯಲಿಗೆ ಬಂದಿದೆ. ಸಂತ್ರಸ್ತೆ ಹಾಗೂ ಆರೋಪಿಗಳು, ಬಾಂಗ್ಲಾದೇಶದಿಂದ ಬಂದು ಇಲ್ಲಿ ಅಕ್ರಮವಾಗಿ ವಾಸವಿದ್ದರು ಎಂಬುದು ಗೊತ್ತಾಗಿದೆ’ ಎಂದರು.</p>.<p>‘ಆರೋಪಿಗಳ ಹಿನ್ನೆಲೆ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಅವರೆಲ್ಲರೂ ಸೇರಿ ಒಂದೇ ವೃತ್ತಿ ಮಾಡುತ್ತಿದ್ದ ಸಂಗತಿ ಗೊತ್ತಾಗಿದೆ. ವೃತ್ತಿ ಬಗ್ಗೆ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>