ಪ್ರಕರಣವೇನು?:‘ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹೋಬಳಿಯ ಕಲ್ಕೆರೆ ಗ್ರಾಮದ ಸರ್ವೇ ನಂಬರ್ 375/2ರಲ್ಲಿನ 22.43 ಎಕರೆ ಅದೂರ್ ಅಣ್ಣೈಯಪ್ಪ ಎಂಬುವವರಿಗೆ ಸೇರಿದ್ದು,2003ರ ಮೇ 21ರಂದು ಸಂಬಂಧಿಕರಾದ ಮಾದಪ್ಪ ಮತ್ತು ಪಿಳ್ಳಮಾದಪ್ಪ ಖಾಲಿ ಹಾಳೆಗಳ ಮೇಲೆ ಅದೂರ್ ಅಣ್ಣೈಯಪ್ಪ ಅವರ ಸಹಿ ಮತ್ತು ಹೆಬ್ಬೆಟ್ಟು ಗುರುತು ಪಡೆದುಕೊಂಡರು.ನಂತರ ಪಾಲುದಾರಿಕೆ ಕರಾರು ಸಿದ್ಧಪಡಿಸಿಕೊಂಡರು‘ ಎಂಬುದು ಆರೋಪ.