‘ನಾವು ಸುಮಾರು 4,500 ಹಾಸಿಗೆ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದೆವು. ಆದರೆ, ದಂಧೆ ಬಯಲಿಗೆಳೆದ ನಮ್ಮ ಮೇಲೆ ಆರೋಪ ಬರುವಂತೆ ಮಾಡಲಾಯಿತು. ಇದರ ಹಿಂದೆ ನಮ್ಮ ಪಕ್ಷದವರೂ ಸೇರಿ ಹಲವರ ಷಡ್ಯಂತ್ರವಿದೆ. ಬೊಮ್ಮನಹಳ್ಳಿ ಬಾಬು ಈ ದಂಧೆ ಮಾಡಿದ್ದು ಎಂದು ಹೇಳಲಾಗಿದೆ. ಈತನಿಗೂ ನನಗೂ ಸಂಪರ್ಕವೇ ಇಲ್ಲ. ಆತ ಯಾರಿಗೆ ಆಪ್ತ? ಕನಿಷ್ಠ ಆರು ತಿಂಗಳಾದರೂ ಜತೆಗಿದ್ದರೆ ಆಪ್ತ ಎನ್ನಬಹುದು. ಸುಖಾಸುಮ್ಮನೆ ಆತನ ಹೆಸರನ್ನು ನನ್ನ ಜತೆಗೆ ಗಂಟು ಹಾಕಲಾಗಿದೆ’ ಎಂದರು.