<p>ಬೆಂಗಳೂರು: ‘ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಹಾಸಿಗೆ ಬ್ಲಾಕಿಂಗ್ ಹಗರಣ ಬಯಲಿಗೆಳೆದ ಬಳಿಕ ನನ್ನ ವಿರುದ್ಧ ನಮ್ಮ ಪಕ್ಷದ ಕೆಲವರು ಷಡ್ಯಂತ್ರ ರೂಪಿಸಿದ್ದಾರೆ. ಈ ಸಂಬಂಧ ವರಿಷ್ಠರಿಗೆ ದೂರು ನೀಡಲು ನಿರ್ಧರಿಸಿದ್ದೇನೆ’ ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹೇಳಿದ್ದಾರೆ.</p>.<p>‘ಈಗಾಗಲೇ ಈ ಸಂಬಂಧ ಪಕ್ಷದ ಅಧ್ಯಕ್ಷರು ಮತ್ತು ಕೆಲವು ಹಿರಿಯರಿಗೆ ದೂರು ನೀಡಿದ್ದೇನೆ. ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಆಗಿರುವ ಎಲ್ಲ ವಿಷಯಗಳನ್ನು ಅವರ ಗಮನಕ್ಕೆ ತಂದಿದ್ದೇನೆ’ ಎಂದು ಅವರು ಸುದ್ದಿಗಾರರಿಗೆ ಮಂಗಳವಾರ ತಿಳಿಸಿದರು.</p>.<p>ಯಾರ ಹೆಸರನ್ನೂ ನೇರವಾಗಿ ಪ್ರಸ್ತಾಪಿಸದ ಅವರು, ‘ಮುಂಬರುವ ದಿನಗಳಲ್ಲಿ ಈ ಕುರಿತು ಸುದ್ದಿಗೋಷ್ಠಿ ಕರೆದು ಎಲ್ಲ ಮಾಹಿತಿಗಳನ್ನು ನೀಡುತ್ತೇನೆ’ ಎಂದರು.</p>.<p>‘ನಾವು ಸುಮಾರು 4,500 ಹಾಸಿಗೆ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದೆವು. ಆದರೆ, ದಂಧೆ ಬಯಲಿಗೆಳೆದ ನಮ್ಮ ಮೇಲೆ ಆರೋಪ ಬರುವಂತೆ ಮಾಡಲಾಯಿತು. ಇದರ ಹಿಂದೆ ನಮ್ಮ ಪಕ್ಷದವರೂ ಸೇರಿ ಹಲವರ ಷಡ್ಯಂತ್ರವಿದೆ. ಬೊಮ್ಮನಹಳ್ಳಿ ಬಾಬು ಈ ದಂಧೆ ಮಾಡಿದ್ದು ಎಂದು ಹೇಳಲಾಗಿದೆ. ಈತನಿಗೂ ನನಗೂ ಸಂಪರ್ಕವೇ ಇಲ್ಲ. ಆತ ಯಾರಿಗೆ ಆಪ್ತ? ಕನಿಷ್ಠ ಆರು ತಿಂಗಳಾದರೂ ಜತೆಗಿದ್ದರೆ ಆಪ್ತ ಎನ್ನಬಹುದು. ಸುಖಾಸುಮ್ಮನೆ ಆತನ ಹೆಸರನ್ನು ನನ್ನ ಜತೆಗೆ ಗಂಟು ಹಾಕಲಾಗಿದೆ’ ಎಂದರು.</p>.<p>ಕೋವಿಡ್ ಎರಡನೇ ಅಲೆಯ ಸಂದರ್ಭ ನಗರದ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಗೆ ಹಾಹಾಕಾರ ಎದ್ದಾಗ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ ಮತ್ತು ಉದಯ್ ಗರುಡಾಚಾರ್ ಸೇರಿ ಹಾಸಿಗೆ ಬ್ಲಾಕಿಂಗ್ ಹಗರಣ ಬಯಲಿಗೆಳೆದಿದ್ದರು.</p>.<p>ಬಳಿಕ ಸತೀಶ್ ರೆಡ್ಡಿ ಆಪ್ತರೇ ಹಾಸಿಗೆ ಬ್ಲಾಕಿಂಗ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು. ಇದೀಗ ಸ್ವಪಕ್ಷೀಯರೇ ತಮ್ಮ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಹಾಸಿಗೆ ಬ್ಲಾಕಿಂಗ್ ಹಗರಣ ಬಯಲಿಗೆಳೆದ ಬಳಿಕ ನನ್ನ ವಿರುದ್ಧ ನಮ್ಮ ಪಕ್ಷದ ಕೆಲವರು ಷಡ್ಯಂತ್ರ ರೂಪಿಸಿದ್ದಾರೆ. ಈ ಸಂಬಂಧ ವರಿಷ್ಠರಿಗೆ ದೂರು ನೀಡಲು ನಿರ್ಧರಿಸಿದ್ದೇನೆ’ ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹೇಳಿದ್ದಾರೆ.</p>.<p>‘ಈಗಾಗಲೇ ಈ ಸಂಬಂಧ ಪಕ್ಷದ ಅಧ್ಯಕ್ಷರು ಮತ್ತು ಕೆಲವು ಹಿರಿಯರಿಗೆ ದೂರು ನೀಡಿದ್ದೇನೆ. ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಆಗಿರುವ ಎಲ್ಲ ವಿಷಯಗಳನ್ನು ಅವರ ಗಮನಕ್ಕೆ ತಂದಿದ್ದೇನೆ’ ಎಂದು ಅವರು ಸುದ್ದಿಗಾರರಿಗೆ ಮಂಗಳವಾರ ತಿಳಿಸಿದರು.</p>.<p>ಯಾರ ಹೆಸರನ್ನೂ ನೇರವಾಗಿ ಪ್ರಸ್ತಾಪಿಸದ ಅವರು, ‘ಮುಂಬರುವ ದಿನಗಳಲ್ಲಿ ಈ ಕುರಿತು ಸುದ್ದಿಗೋಷ್ಠಿ ಕರೆದು ಎಲ್ಲ ಮಾಹಿತಿಗಳನ್ನು ನೀಡುತ್ತೇನೆ’ ಎಂದರು.</p>.<p>‘ನಾವು ಸುಮಾರು 4,500 ಹಾಸಿಗೆ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದೆವು. ಆದರೆ, ದಂಧೆ ಬಯಲಿಗೆಳೆದ ನಮ್ಮ ಮೇಲೆ ಆರೋಪ ಬರುವಂತೆ ಮಾಡಲಾಯಿತು. ಇದರ ಹಿಂದೆ ನಮ್ಮ ಪಕ್ಷದವರೂ ಸೇರಿ ಹಲವರ ಷಡ್ಯಂತ್ರವಿದೆ. ಬೊಮ್ಮನಹಳ್ಳಿ ಬಾಬು ಈ ದಂಧೆ ಮಾಡಿದ್ದು ಎಂದು ಹೇಳಲಾಗಿದೆ. ಈತನಿಗೂ ನನಗೂ ಸಂಪರ್ಕವೇ ಇಲ್ಲ. ಆತ ಯಾರಿಗೆ ಆಪ್ತ? ಕನಿಷ್ಠ ಆರು ತಿಂಗಳಾದರೂ ಜತೆಗಿದ್ದರೆ ಆಪ್ತ ಎನ್ನಬಹುದು. ಸುಖಾಸುಮ್ಮನೆ ಆತನ ಹೆಸರನ್ನು ನನ್ನ ಜತೆಗೆ ಗಂಟು ಹಾಕಲಾಗಿದೆ’ ಎಂದರು.</p>.<p>ಕೋವಿಡ್ ಎರಡನೇ ಅಲೆಯ ಸಂದರ್ಭ ನಗರದ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಗೆ ಹಾಹಾಕಾರ ಎದ್ದಾಗ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ ಮತ್ತು ಉದಯ್ ಗರುಡಾಚಾರ್ ಸೇರಿ ಹಾಸಿಗೆ ಬ್ಲಾಕಿಂಗ್ ಹಗರಣ ಬಯಲಿಗೆಳೆದಿದ್ದರು.</p>.<p>ಬಳಿಕ ಸತೀಶ್ ರೆಡ್ಡಿ ಆಪ್ತರೇ ಹಾಸಿಗೆ ಬ್ಲಾಕಿಂಗ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು. ಇದೀಗ ಸ್ವಪಕ್ಷೀಯರೇ ತಮ್ಮ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>