<p><strong>ಬೆಂಗಳೂರು</strong>: ರೈಲ್ವೆ ಸುರಕ್ಷತಾ ಆಯುಕ್ತರು ‘ನಮ್ಮ ಮೆಟ್ರೊ’ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ–ಮಾದಾವರ ನಿಲ್ದಾಣಗಳ ನಡುವೆ ಅ.3 ಮತ್ತು 4ರಂದು ಸುರಕ್ಷತಾ ತಪಾಸಣೆ ನಡೆಸಲಿದ್ದಾರೆ.</p>.<p>ಹಸಿರು ಮಾರ್ಗದಲ್ಲಿ ವಿಸ್ತರಿತಗೊಂಡಿರುವ 3.7 ಕಿ.ಮೀ ದೂರದ ಈ ಮಾರ್ಗದಲ್ಲಿ ಮಂಜುನಾಥನಗರ, ಚಿಕ್ಕಬಿದರಕಲ್ಲು (ಜಿಂದಾಲ್), ಮಾದಾವರ ಮೆಟ್ರೊ ನಿಲ್ದಾಣಗಳಿವೆ. ಸಿವಿಲ್ ಕಾಮಗಾರಿ ಬಳಿಕ ಆಗಸ್ಟ್ನಿಂದ ಸಾಮರ್ಥ್ಯ ಪರೀಕ್ಷೆ, ಸಿಗ್ನಲಿಂಗ್, ದೂರಸಂಪರ್ಕ, ವಿದ್ಯುತ್ ಸರಬರಾಜು ವ್ಯವಸ್ಥೆ ಸಿಸ್ಟಂ ಸಂಯೋಜನೆ, ಸಾಮರ್ಥ್ಯ ಪರಿಶೀಲನೆ ಸಹಿತ ಪ್ರಮುಖ ಪರೀಕ್ಷೆಗಳು ನಡೆದಿದ್ದವು. </p>.<p>ಸುರಕ್ಷತಾ ಆಯುಕ್ತರು ಪರಿಶೀಲಿಸಬೇಕು ಎಂದು ಬಿಎಂಆರ್ಸಿಎಲ್, ರೈಲ್ವೆ ಸುರಕ್ಷತಾ ಆಯುಕ್ತರಿಗೆ ಪತ್ರ ಬರೆದಿತ್ತು. ಸುರಕ್ಷತಾ ಆಯುಕ್ತ ಅನಂತ್ ಮಧುಕರ್ ಚೌಧರಿ ನೇತೃತ್ವದ ತಂಡವು ಅ.3, 4ರಂದು ನಡೆಸಲಿದೆ ಎಂದು ರೈಲ್ವೆ ಸುರಕ್ಷತೆ/ಟೆಕ್ ದಕ್ಷಿಣ ವೃತ್ತದ ಉಪ ಆಯುಕ್ತರು ಬಿಎಂಆರ್ಸಿಎಲ್ಗೆ ಮಾಹಿತಿ ನೀಡಿದ್ದಾರೆ.</p>.<p><strong>15 ದಿನದಲ್ಲಿ ವಾಣಿಜ್ಯ ಸಂಚಾರ?</strong>: ‘ಗುಣಮಟ್ಟ ಪರೀಕ್ಷೆ ತೃಪ್ತಿಕರವಾದರೆ ಆಯುಕ್ತರು ಆ ನಂತರ ಒಂದು ವಾರದಲ್ಲಿ ವಾಣಿಜ್ಯ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ. ಆ ಪ್ರಕಾರ, ಅಕ್ಟೋಬರ್ ಎರಡನೇ ವಾರದಲ್ಲಿ ವಾಣಿಜ್ಯ ಸಂಚಾರ ಆರಂಭಗೊಳ್ಳಬಹುದು’ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಸುರಕ್ಷತಾ ಆಯುಕ್ತರು ಗುಣಮಟ್ಟ ತಪಾಸಣೆ ನಡೆಸಿದ ಮೇಲೆ ಅವರು ಸೂಚಿಸಿದ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಆಯುಕ್ತರು ಬರುವ ಮೊದಲು ಎಲ್ಲ ಪರೀಕ್ಷೆಗಳನ್ನು ನಡೆಸಿ ನ್ಯೂನತೆಗಳನ್ನು ಸರಿಪಡಿಸಿರುವುದರಿಂದ ಹೆಚ್ಚಿನ ಬದಲಾವಣೆಗಳು ಇರುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<p>ಹಸಿರು ಮಾರ್ಗದ ಅಭಿವೃದ್ಧಿ ವಿವಿಧ ಹಂತಗಳಲ್ಲಿ ನಡೆದಿದ್ದು, ನಾಗಸಂದ್ರ–ಮಾದಾವರ ಕೊನೆಯ ಹಂತವಾಗಿದೆ. ಕಾಮಗಾರಿ 2017 ರಲ್ಲಿ ಆರಂಭವಾಗಿದ್ದು, 2019ರಲ್ಲಿ ಪೂರ್ಣಗೊಳ್ಳಬೇಕಿತ್ತು.</p>.<p>ಭೂಸ್ವಾಧೀನದ ವಿರುದ್ಧ ಕೆಲವರು ಕೋರ್ಟ್ ಮೆಟ್ಟಿಲೇರಿದ್ದು ಹಾಗೂ ’ಕೋವಿಡ್’ ನಿಂದಾಗಿ 5 ವರ್ಷ ತಡವಾಗಿದ್ದು, ಈ ಸಂಚಾರಕ್ಕೆ ಸಿದ್ಧವಾಗುತ್ತಿದೆ.</p>.<p>ಮೆಟ್ರೊ ರೈಲು ಸಂಚಾರ ಸೇವೆಯು ಆರಂಭವಾದರೆ ನೆಲಮಂಗಲ, ಮಾಕಳಿ, ಮಾದನಾಯಕನಹಳ್ಳಿ ಆಸುಪಾಸಿನ ಪ್ರದೇಶಗಳ ನಿವಾಸಿಗಳಿಗೆ ನಗರಕ್ಕೆ ಬರುವವರಿಗೆ ಅನುಕೂಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<blockquote>ಹಸಿರು ಮಾರ್ಗದ 3.7 ಕಿ.ಮೀ. ದೂರದ ವಿಸ್ತರಿತ ಮಾರ್ಗ ‘ ‘ಸಿಗ್ನಲಿಂಗ್, ವಿದ್ಯುತ್ ಪೂರೈಕೆ, ಸಾಮರ್ಥ್ಯ ಪರೀಕ್ಷೆ ಯಶಸ್ವಿ ನೆಲಮಂಗಲ, ಮಾಕಳಿ ವ್ಯಾಪ್ತಿಯ ನಿವಾಸಿಗಳಿಗೆ ಅನುಕೂಲ</blockquote>.<p><strong>‘ಗುಣಮಟ್ಟ ತೃಪ್ತಿಕರ ಎನಿಸಿದರೆ ವಾರದಲ್ಲೇ ಅನುಮತಿ’</strong></p><p>‘ಗುಣಮಟ್ಟ ಪರೀಕ್ಷೆ ತೃಪ್ತಿಕರವಾದರೆ ಆಯುಕ್ತರು ಆ ನಂತರ ಒಂದು ವಾರದಲ್ಲಿ ವಾಣಿಜ್ಯ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ. ಆ ಪ್ರಕಾರ, ಅಕ್ಟೋಬರ್ ಎರಡನೇ ವಾರದಲ್ಲಿ ವಾಣಿಜ್ಯ ಸಂಚಾರ ಆರಂಭಗೊಳ್ಳಬಹುದು’ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>‘ಸುರಕ್ಷತಾ ಆಯುಕ್ತರು ಗುಣಮಟ್ಟ ತಪಾಸಣೆ ನಡೆಸಿದ ಮೇಲೆ ಅವರು ಸೂಚಿಸಿದ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಆಯುಕ್ತರು ಬರುವ ಮೊದಲು ಎಲ್ಲ ಪರೀಕ್ಷೆಗಳನ್ನು ನಡೆಸಿ ನ್ಯೂನತೆಗಳನ್ನು ಸರಿಪಡಿಸಿರುವುದರಿಂದ ಹೆಚ್ಚಿನ ಬದಲಾವಣೆಗಳು ಇರುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೈಲ್ವೆ ಸುರಕ್ಷತಾ ಆಯುಕ್ತರು ‘ನಮ್ಮ ಮೆಟ್ರೊ’ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ–ಮಾದಾವರ ನಿಲ್ದಾಣಗಳ ನಡುವೆ ಅ.3 ಮತ್ತು 4ರಂದು ಸುರಕ್ಷತಾ ತಪಾಸಣೆ ನಡೆಸಲಿದ್ದಾರೆ.</p>.<p>ಹಸಿರು ಮಾರ್ಗದಲ್ಲಿ ವಿಸ್ತರಿತಗೊಂಡಿರುವ 3.7 ಕಿ.ಮೀ ದೂರದ ಈ ಮಾರ್ಗದಲ್ಲಿ ಮಂಜುನಾಥನಗರ, ಚಿಕ್ಕಬಿದರಕಲ್ಲು (ಜಿಂದಾಲ್), ಮಾದಾವರ ಮೆಟ್ರೊ ನಿಲ್ದಾಣಗಳಿವೆ. ಸಿವಿಲ್ ಕಾಮಗಾರಿ ಬಳಿಕ ಆಗಸ್ಟ್ನಿಂದ ಸಾಮರ್ಥ್ಯ ಪರೀಕ್ಷೆ, ಸಿಗ್ನಲಿಂಗ್, ದೂರಸಂಪರ್ಕ, ವಿದ್ಯುತ್ ಸರಬರಾಜು ವ್ಯವಸ್ಥೆ ಸಿಸ್ಟಂ ಸಂಯೋಜನೆ, ಸಾಮರ್ಥ್ಯ ಪರಿಶೀಲನೆ ಸಹಿತ ಪ್ರಮುಖ ಪರೀಕ್ಷೆಗಳು ನಡೆದಿದ್ದವು. </p>.<p>ಸುರಕ್ಷತಾ ಆಯುಕ್ತರು ಪರಿಶೀಲಿಸಬೇಕು ಎಂದು ಬಿಎಂಆರ್ಸಿಎಲ್, ರೈಲ್ವೆ ಸುರಕ್ಷತಾ ಆಯುಕ್ತರಿಗೆ ಪತ್ರ ಬರೆದಿತ್ತು. ಸುರಕ್ಷತಾ ಆಯುಕ್ತ ಅನಂತ್ ಮಧುಕರ್ ಚೌಧರಿ ನೇತೃತ್ವದ ತಂಡವು ಅ.3, 4ರಂದು ನಡೆಸಲಿದೆ ಎಂದು ರೈಲ್ವೆ ಸುರಕ್ಷತೆ/ಟೆಕ್ ದಕ್ಷಿಣ ವೃತ್ತದ ಉಪ ಆಯುಕ್ತರು ಬಿಎಂಆರ್ಸಿಎಲ್ಗೆ ಮಾಹಿತಿ ನೀಡಿದ್ದಾರೆ.</p>.<p><strong>15 ದಿನದಲ್ಲಿ ವಾಣಿಜ್ಯ ಸಂಚಾರ?</strong>: ‘ಗುಣಮಟ್ಟ ಪರೀಕ್ಷೆ ತೃಪ್ತಿಕರವಾದರೆ ಆಯುಕ್ತರು ಆ ನಂತರ ಒಂದು ವಾರದಲ್ಲಿ ವಾಣಿಜ್ಯ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ. ಆ ಪ್ರಕಾರ, ಅಕ್ಟೋಬರ್ ಎರಡನೇ ವಾರದಲ್ಲಿ ವಾಣಿಜ್ಯ ಸಂಚಾರ ಆರಂಭಗೊಳ್ಳಬಹುದು’ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಸುರಕ್ಷತಾ ಆಯುಕ್ತರು ಗುಣಮಟ್ಟ ತಪಾಸಣೆ ನಡೆಸಿದ ಮೇಲೆ ಅವರು ಸೂಚಿಸಿದ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಆಯುಕ್ತರು ಬರುವ ಮೊದಲು ಎಲ್ಲ ಪರೀಕ್ಷೆಗಳನ್ನು ನಡೆಸಿ ನ್ಯೂನತೆಗಳನ್ನು ಸರಿಪಡಿಸಿರುವುದರಿಂದ ಹೆಚ್ಚಿನ ಬದಲಾವಣೆಗಳು ಇರುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<p>ಹಸಿರು ಮಾರ್ಗದ ಅಭಿವೃದ್ಧಿ ವಿವಿಧ ಹಂತಗಳಲ್ಲಿ ನಡೆದಿದ್ದು, ನಾಗಸಂದ್ರ–ಮಾದಾವರ ಕೊನೆಯ ಹಂತವಾಗಿದೆ. ಕಾಮಗಾರಿ 2017 ರಲ್ಲಿ ಆರಂಭವಾಗಿದ್ದು, 2019ರಲ್ಲಿ ಪೂರ್ಣಗೊಳ್ಳಬೇಕಿತ್ತು.</p>.<p>ಭೂಸ್ವಾಧೀನದ ವಿರುದ್ಧ ಕೆಲವರು ಕೋರ್ಟ್ ಮೆಟ್ಟಿಲೇರಿದ್ದು ಹಾಗೂ ’ಕೋವಿಡ್’ ನಿಂದಾಗಿ 5 ವರ್ಷ ತಡವಾಗಿದ್ದು, ಈ ಸಂಚಾರಕ್ಕೆ ಸಿದ್ಧವಾಗುತ್ತಿದೆ.</p>.<p>ಮೆಟ್ರೊ ರೈಲು ಸಂಚಾರ ಸೇವೆಯು ಆರಂಭವಾದರೆ ನೆಲಮಂಗಲ, ಮಾಕಳಿ, ಮಾದನಾಯಕನಹಳ್ಳಿ ಆಸುಪಾಸಿನ ಪ್ರದೇಶಗಳ ನಿವಾಸಿಗಳಿಗೆ ನಗರಕ್ಕೆ ಬರುವವರಿಗೆ ಅನುಕೂಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .<blockquote>ಹಸಿರು ಮಾರ್ಗದ 3.7 ಕಿ.ಮೀ. ದೂರದ ವಿಸ್ತರಿತ ಮಾರ್ಗ ‘ ‘ಸಿಗ್ನಲಿಂಗ್, ವಿದ್ಯುತ್ ಪೂರೈಕೆ, ಸಾಮರ್ಥ್ಯ ಪರೀಕ್ಷೆ ಯಶಸ್ವಿ ನೆಲಮಂಗಲ, ಮಾಕಳಿ ವ್ಯಾಪ್ತಿಯ ನಿವಾಸಿಗಳಿಗೆ ಅನುಕೂಲ</blockquote>.<p><strong>‘ಗುಣಮಟ್ಟ ತೃಪ್ತಿಕರ ಎನಿಸಿದರೆ ವಾರದಲ್ಲೇ ಅನುಮತಿ’</strong></p><p>‘ಗುಣಮಟ್ಟ ಪರೀಕ್ಷೆ ತೃಪ್ತಿಕರವಾದರೆ ಆಯುಕ್ತರು ಆ ನಂತರ ಒಂದು ವಾರದಲ್ಲಿ ವಾಣಿಜ್ಯ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ. ಆ ಪ್ರಕಾರ, ಅಕ್ಟೋಬರ್ ಎರಡನೇ ವಾರದಲ್ಲಿ ವಾಣಿಜ್ಯ ಸಂಚಾರ ಆರಂಭಗೊಳ್ಳಬಹುದು’ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>‘ಸುರಕ್ಷತಾ ಆಯುಕ್ತರು ಗುಣಮಟ್ಟ ತಪಾಸಣೆ ನಡೆಸಿದ ಮೇಲೆ ಅವರು ಸೂಚಿಸಿದ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಆಯುಕ್ತರು ಬರುವ ಮೊದಲು ಎಲ್ಲ ಪರೀಕ್ಷೆಗಳನ್ನು ನಡೆಸಿ ನ್ಯೂನತೆಗಳನ್ನು ಸರಿಪಡಿಸಿರುವುದರಿಂದ ಹೆಚ್ಚಿನ ಬದಲಾವಣೆಗಳು ಇರುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>