<p><strong>ಬೆಂಗಳೂರು:</strong> ‘ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನೇತೃತ್ವ ವಹಿಸಿರುವ ಸಿಬಿಐ ಹೈದರಾಬಾದ್ ಘಟಕದ ಜಂಟಿ ನಿರ್ದೇಶಕ ಎ.ವೈ.ವಿ ಕೃಷ್ಣ ಅವರನ್ನು ತನಿಖಾಧಿಕಾರಿ ಸ್ಥಾನದಲ್ಲಿ ಮುಂದುವರಿಸಲು ಕೋರಿರುವ ಪ್ರಸ್ತಾವ ಪರಿಶೀಲನೆಯಲ್ಲಿದೆ’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ‘ಎ.ವೈ.ವಿ ಕೃಷ್ಣ ಅವರ ಮುಂದುವರಿಕೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಇದಕ್ಕೆ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್, ‘ಕೃಷ್ಣ ಅವರನ್ನು ಮುಂದುವರಿಸುವಂತೆ ಕೋರಿದ ಮತ್ತು ಈ ಕುರಿತ ಪ್ರಗತಿಯ ಕಡತ ಕೇಂದ್ರ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಸಚಿವಾಲಯದ ಮುಂದಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.</p>.<p>ಇದಕ್ಕೆ ನ್ಯಾಯಪೀಠ, ‘ಪ್ರಕರಣದ ತನಿಖೆ ಎಂದಿನಂತೆ ಮುಂದುವರಿಯಲಿ’ ಎಂದು ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನೇತೃತ್ವ ವಹಿಸಿರುವ ಸಿಬಿಐ ಹೈದರಾಬಾದ್ ಘಟಕದ ಜಂಟಿ ನಿರ್ದೇಶಕ ಎ.ವೈ.ವಿ ಕೃಷ್ಣ ಅವರನ್ನು ತನಿಖಾಧಿಕಾರಿ ಸ್ಥಾನದಲ್ಲಿ ಮುಂದುವರಿಸಲು ಕೋರಿರುವ ಪ್ರಸ್ತಾವ ಪರಿಶೀಲನೆಯಲ್ಲಿದೆ’ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ‘ಎ.ವೈ.ವಿ ಕೃಷ್ಣ ಅವರ ಮುಂದುವರಿಕೆಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಇದಕ್ಕೆ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್, ‘ಕೃಷ್ಣ ಅವರನ್ನು ಮುಂದುವರಿಸುವಂತೆ ಕೋರಿದ ಮತ್ತು ಈ ಕುರಿತ ಪ್ರಗತಿಯ ಕಡತ ಕೇಂದ್ರ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಸಚಿವಾಲಯದ ಮುಂದಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.</p>.<p>ಇದಕ್ಕೆ ನ್ಯಾಯಪೀಠ, ‘ಪ್ರಕರಣದ ತನಿಖೆ ಎಂದಿನಂತೆ ಮುಂದುವರಿಯಲಿ’ ಎಂದು ಸಿಬಿಐಗೆ ಸೂಚಿಸಿ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>