ಇನ್ಸ್ಪೆಕ್ಟರ್ ಪರವಾಗಿ ₹ 6 ಲಕ್ಷ ಲಂಚ ಪಡೆದಿದ್ದ ರಾಜು ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದರು. ಯಶವಂತ ತಪ್ಪಿಸಿಕೊಂಡು ಪರಾರಿಯಾಗಿ, ಸುದೀರ್ಘ ಕಾಲ ತಲೆಮರೆಸಿಕೊಂಡಿದ್ದರು. ಇದೇ ಪ್ರಕರಣದಲ್ಲಿ ₹ 5 ಲಕ್ಷ ಲಂಚ ಪಡೆದಿದ್ದ ಚಿಕ್ಕಜಾಲ ಹೋಬಳಿಯ ಕಂದಾಯ ನಿರೀಕ್ಷಕ ಪುಟ್ಟ ಹನುಮಯ್ಯ ಅಲಿಯಾಸ್ ಪ್ರವೀಣ್ ಅವರನ್ನು ಅದೇ ದಿನ ಎಸಿಬಿ ಅಧಿಕಾರಿಗಳು ಬಂಧಿಸಿದ್ದರು.